ಬೆಂಗಳೂರು prajakiran.com : ರೌಡೀಶೀಟರ್ ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯ ಲಗ್ಗೆರೆ ಬಳಿ ಸಂಜೆ 4:30ರ ಸುಮಾರಿಗೆ ಈ ಮಾರಣಾಂತಿಕ ಹಲ್ಲೆ ನಡೆದಿದೆ.
ಡಿ.ಜೆ ಹಳ್ಳಿ ನಿವಾಸಿ ಹಿದಾಯತ್ ಖಾನ್ ಎಂಬಾತನೇ ಹಲ್ಲೆಗೊಳಗಾದ ರೌಡೀಶೀಟರ್ ಆಗಿದ್ದಾನೆ.
ಮೂರು ನಾಲ್ಕು ಜನರ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದ್ದು. ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಲಾಗಿದೆ.
ಇತ್ತೀಚೆಗೆ ಜೈಲಿನಿಂದ ಹೊರಬಂದಿದ್ದ ಹಿದಾಯತ್ ಖಾನ್ ಕೈ, ಕಾಲು ಮುಖವೆಲ್ಲಾ ರಕ್ತದ ಮಡುವಿನಲ್ಲಿ ತೇಲಿದೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿರುವ ಶಂಕೆಯಿದ್ದು, ಗಾಯಾಳು ಹಿದಾಯತ್ ಖಾನ್ ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಬೆಂಗಳೂರಿನ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು, ತನಿಖೆ ಮುಂದುವರೆದಿದೆ.