ಮೈಸೂರು Prajakiran.com : ಇಲ್ಲಿನ ಸಂದೇಶ್ ಪ್ರಿನ್ಸ್ ಹೋಟೆಲ್ನಲ್ಲಿ ದಲಿತ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ನಿರ್ಮಾಪಕ ಇಂದ್ರಜೀತ್ ಲಂಕೇಶ್ ಆರೋಪಿಸಿದ್ದಾರೆ.
ಈ ಕುರಿತು ಮಾಧ್ಯಮ ದವರೊಂದಿಗೆ ಮಾತನಾಡಿರುವ ಇಂದ್ರಜಿತ್ ಲಂಕೇಶ್, ಈ ರೀತಿ ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪರವಾಗಿ ನೀವು ನಿಲ್ಲಬೇಕು. ಸೆಲೆಬ್ರಿಟಿಗಳ ಜೊತೆ ಅಲ್ಲ.
ಅವರು ಜನಸಾಮಾನ್ಯರು, ಬಡವರು ಅವರಿಗೆ ನ್ಯಾಯ ಸಿಗಬೇಕು ಎಂದು ಹೋಟೆಲ್ ಮಾಲೀಕ ಸಂದೇಶ್ ನಾಗರಾಜ್ ಅವರಿಗೆ ಹೇಳಿದ್ದಾರೆ.
ಈ ಘಟನೆಯ ಹಿನ್ನೆಲೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಹೋಟೆಲ್ನ ಸಿಸಿಟಿವಿ ದೃಶ್ಯ ಪರಿಶೀಲಿಸಿದರೆ ಎಲ್ಲವೂ ಹೊರಬರುತ್ತದೆ ಎಂದು ಇಂದ್ರಜಿತ್ ಹೇಳಿದ್ದಾರೆ.
ಇನ್ನೂ ಈ ತನಿಖೆಗೆ ನಾನೂ ಸಹ ಸಹಾಯ ಮಾಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.