ಅಪರಾಧ

ಧಾರವಾಡದ ಮಹಾನಗರ ಪಾಲಿಕೆ ಆವರಣದಲ್ಲಿ ಹಾಡಹಗಲೇ ಗುತ್ತಿಗೆದಾರನ ಮೇಲೆ ಮಾರಣಾಂತಿಕ ಹಲ್ಲೆ …..!

ಧಾರವಾಡ prajakiran.com : ಧಾರವಾಡ ನಗರದ ಹೃದಯ ಭಾಗದಲ್ಲಿರುವ ಮಹಾನಗರ ಪಾಲಿಕೆ ಆವರಣದಲ್ಲಿ ಹಾಡಹಗಲೇ ಗುತ್ತಿಗೆದಾರನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.

ಇದು ಪಾಲಿಕೆ ಸಿಬ್ಬಂದಿ ಹಾಗೂ ಪಾಲಿಕೆ ಆವರಣಕ್ಕೆ ದಿನ ಬೆಳಗಾದರೆ ಆಗಮಿಸುವ ಸ್ಥಳೀಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ಆಟೋದಲ್ಲಿ ಬಂದ ಹಲವರು ಗುತ್ತಿಗೆದಾರನಿಗೆ ಬಡಿಗೆಯಿಂದ ಮನ ಬಂದಂತೆ ಬಡಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದಾಗಿ ತೀವ್ರವಾಗಿ ಗಾಯಗೊಂಡ ಗುತ್ತಿಗೆದಾರ ಅಜೀಜ್ ಮಾಲಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡದ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆದಾರನಾಗಿರುವ ಅಜೀಜ‌‌ ಮಾಲಿ ಮೇಲೆ ನಡೆದ ಹಲ್ಲೆಗೆ ಹಳೆಯ ದ್ವೇಷ ಕಾರಣ ಎನ್ನಲಾಗಿದೆ.

ಅದರೆ ಹಾಡಹಗಲೇ ಸಿನಿಮಾ ಶೈಲಿಯಲ್ಲಿ ಅದು ಹುಬ್ಬಳ್ಳಿ ಧಾರವಾಡ
ಮಹಾನಗರ ಪಾಲಿಕೆಯ ಆವರಣದಲ್ಲಿಯೇ ಹಲ್ಲೆ ಮಾಡಿ ಪರಾರಿಯಾಗಿರುವುದು ದುಷ್ಕರ್ಮಿಗಳ ಅಟ್ಟಹಾಸಕ್ಕೆ ಸಾಕ್ಷಿಯಾಗಿದೆ‌

ಮೈ ಹಾಗೂ ಕೈಗೆ ಮನಬಂದಂತೆ ಥಳಿಸಿದ್ದರಿಂದ ಅಜೀಜ್ ದೇಹದ ರಕ್ತ ಹೆಪ್ಪುಗಟ್ಟಿದ್ದು, ಕೈ ಕೂಡಾ ಮುರಿದಿದೆ ಎಂದು ಹೇಳಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಉಪನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.‌

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *