prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಅಂತಾರಾಷ್ಟ್ರೀಯ

ದೆಹಲಿಯಲ್ಲಿ ಮತ್ತೆ ಮೇ.31ರ ವರೆಗೆ ಲಾಕ್ ಡೌನ್

ನವದೆಹಲಿ‌ prajakiran.com : ದೆಹಲಿಯಲ್ಲಿ ಮತ್ತೆ ಮೇ.31ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಸತತವಾಗಿ 5ನೇ ಭಾರಿಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಲಸಿಕೆ ಪೂರೈಸಲು ಸಿದ್ಧತೆ ನಡೆಸಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2.5ಕ್ಕೆ ಇಳಿದಿದ್ದು, ಕಳೆದ 24 ಗಂಟೆಗಳಲ್ಲಿ 1600 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ ಎಂದರು. Share […]

ಅಂತಾರಾಷ್ಟ್ರೀಯ

ಮತ್ತೆ ಏರಿದ ಪೆಟ್ರೋಲ್, ಡೀಸೆಲ್ ಬೆಲೆ…..!

ನವದೆಹಲಿ prajakiran. com : ದೇಶದಲ್ಲಿ ಪದೆ ಪದೇ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 13 ಪೈಸೆ, ಡೀಸೆಲ್ ನಲ್ಲಿ 29 ಪೈಸೆ ಹೆಚ್ಚಳವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ 96.14 ರೂ. ಡೀಸೆಲ್ 88.84 ರೂಗೆ ಬೆಲೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 93.21 ರೂ. ಡೀಸೆಲ್ 84.07ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ 99.49 ರೂ. ಡೀಸೆಲ್ 92.78 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ 94.40 […]

ರಾಜ್ಯ

ಗದಗದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸೋಂಕಿತ ಮಹಿಳೆ….!

ಗದಗ Prajakiran.com : ಕೊರೋನಾ ಸೋಂಕು ತಗುಲಿ, ಹೋಂ ಐಸೋಲೇಷನ್‌ನಲ್ಲಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಮೃತರು ಲಲಿತಾ ಶಂಕರಪ್ಪ ರೋಣದ (45) ಎಂದು ಗುರುತಿಸಲಾಗಿದೆ. ಕಳೆದ‌ ವಾರ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇಂದು ಬೆಳಗಿನಜಾವ ಬಹಿರ್ದೆಸೆಗೆ ಎಂದು ತೆರಳಿದ್ದು, ಗ್ರಾಮದ ಹೊರವಲಯದ ಮರಕ್ಕೆ ನೇಣು ಬಿಗಿದುಕೊಂಡು‌ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ […]

ಅಂತಾರಾಷ್ಟ್ರೀಯ

ಗುಂಡಿನ ದಾಳಿ : ಪೋಲಿಸರ ಗುಂಡಿಗೆ 6 ಜನ ಉಗ್ರರು ಬಲಿ

ಅಸ್ಸಾಂ prajakiran.com : ನಾಗಾಲ್ಯಾಂಡ್‌ನ ಧನ್ಸಿರಿ ಪ್ರದೇಶದಲ್ಲಿ ಅಸ್ಸಾಂ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರ ಗುಂಡಿಗೆ 6 ಜನ ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳಿಗ್ಗೆ ಅಸ್ಸಾಂ ಗಡಿಯಲ್ಲಿ ರೈಫಲ್ಸ್ ಮತ್ತು ಅಸ್ಸಾಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಶಸ್ತ್ರಸಜ್ಜಿತ ಉಗ್ರರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಪ್ರಕಾಶ್ ಸೋನೊವಾಲ್ ನೇತೃತ್ವದಲ್ಲಿ ಎನ್​ಕೌಂಟರ್ […]

ಕ್ರೀಡೆ

ಕೊಲೆ ಪ್ರಕರಣದಲ್ಲಿ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ : ದೆಹಲಿ ಪೋಲಿಸರಿಂದ ಅಧಿಕೃತ ಹೇಳಿಕೆ

ನವದೆಹಲಿ prajakiran.com : ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪದ ಮೇಲೆ ರೆಸ್ಲರ್ ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸುಶೀಲ್‌ ಕುಮಾರನನ್ನು ಬಂಧಿಸಲಾಗಿದೆ ಎಂದು ದೆಹಲಿಯ ಸ್ಪೆಶಲ್ ಸೆಲ್‌ನ ಸ್ಪೆಶಲ್ ಸಿಪಿ ನೀರಜ್ ಠಾಕೂರ್ ಮಾಹಿತಿ ನೀಡಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಸೆಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ಸ್‌ಪೆಕ್ಟರ್ ಶಿವಕುಮಾರ್, ಇನ್ಸ್‌ಪೆಕ್ಟರ್ ಕರಂಬೀರ್ ನೇತೃತ್ವದ ವಿಶೇಷ ಸೆಲ್ ಎಸ್‌ಆರ್ ತಂಡ […]

ಅಂತಾರಾಷ್ಟ್ರೀಯ

ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ : ಒಂದೇ ದಿನ 3,741 ಸಾವು

ನವದೆಹಲಿ Prajakiran.com : ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,40,842 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,40,842 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,65,30,132 ರಷ್ಟಾಗಿದೆ. ಇನ್ನೂ ನಿನ್ನೆ ಒಂದೇ ದಿನ ದೇಶದಲ್ಲಿ 3,55,102 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,34,25,467 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 28,05,399 ಸೋಂಕಿತರು ವಿವಿಧ […]

ಜಿಲ್ಲೆ

ಧಾರವಾಡದ ಸಿದ್ದೇಶ್ವರ ಕಾಲೋನಿಯಲ್ಲಿ ಒಂದೇ ದಿನ 62 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ….!

ಧಾರವಾಡ prajakiran. com : ಧಾರವಾಡದ ಸಿದ್ದೇಶ್ವರ ಕಾಲೋನಿಯಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 62 ಕೋವಿಡ್ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ಅಚ್ಚರಿ ಹಾಗೂ ದುರಂತದ ಸಂಗತಿಯೆಂದರೆ ಅದರಲ್ಲಿ 12 ಜನ ಸೋಂಕಿತರು ಮಾತ್ರ ಕೋವಿಡ್ ಕಾಳಜಿ ಕೇಂದ್ರಕ್ಕೆ ದಾಖಲಾಗಿದ್ದಾರೆ. ಉಳಿದವರು ಕಾಳಜಿ ಕೇಂದ್ರಕ್ಕೆ ದಾಖಲಾಗಲು ಒಪ್ಪುತ್ತಿಲ್ಲ. ಹೀಗಾಗಿ ಧಾರವಾಡ ಜಿಲ್ಲಾಡಳಿತ ಇದನ್ನು ಪೂರ್ಣವಾಗಿ ಕಂಟೆನ್ಮೆಂಟ್ ಝೋನ್ ಆಗಿ ಡಿಕ್ಲೀಯರ್ ಮಾಡಿದೆ. ಅಲ್ಲಿನ ಎಲ್ಲ ಸಂಪರ್ಕ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲು ಕ್ರಮಕೈಗೊಂಡಿದೆ ಎಂದು ಜಿಲ್ಲಾಧಿಕಾರಿ […]

ರಾಜ್ಯ

ಯಮಕನಮರಡಿ ಬಂಗಾರ ನಾಪತ್ತೆ ಪ್ರಕರಣದ ಪ್ರಮುಖ‌ ಕಿಂಗ್ ಪಿನ್ ಕಿರಣ್ ಐಜಿಪಿ ಜೊತೆಗೆ ಇದ್ದ ಪೋಟೋ ವೈರಲ್

ಬೆಳಗಾವಿ prajakiran.com : ಯಮಕನಮರಡಿ ಪೊಲೀಸ್ ಠಾಣೆಯ ನಾಲ್ಕು ಕೆಜಿ ಬಂಗಾರ ನಾಪತ್ತೆ ಪ್ರಕರಣದ ಪ್ರಮುಖ‌ ಕಿಂಗ್ ಪಿನ್ ಎನ್ನಲಾದ ಕಿರಣ್ ವೀರನಗೌಡರ, ಐಜಿಪಿ ರಾಘವೇಂದ್ರ ಸುಹಾಸ್ ಅವರ ಜೊತೆಗೆ ಇದ್ದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪೋಟೋ ಐಜಿಪಿ ಕಚೇರಿಯಲ್ಲಿ ಅವರಿಗೆ ರಾಘವೇಂದ್ರ ಸುಹಾಸ ಅವರಿಗೆ ಸನ್ಮಾನ ಮಾಡಿದ್ದಾಗಿದೆ. ಈ ಪೋಟೋ ಇದೀಗ ಹತ್ತು ಹಲವು ಅನುಮಾನ ಹುಟ್ಟು ಹಾಕಿದೆ. ಈತ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಒಡನಾಟ ಹೊಂದಿದ್ದ ಆರೋಪ ಕೇಳಿ […]

ಜಿಲ್ಲೆ

ನಿವೃತ್ತ ಶಿಕ್ಷಕಿ ಶಕುಂತಲಾ ಆರಾಧ್ಯಮಠ ನಿಧನ

ಧಾರವಾಡ prajakiran.com : ಇಲ್ಲಿಯ ಕುಮಾರೇಶ್ವರ ನಗರದ ನಿವಾಸಿಯಾಗಿದ್ದ ನಿವೃತ್ತ ಶಿಕ್ಷಕಿ ಶಕುಂತಲಾ ಆರಾಧ್ಯಮಠ (74) ಶುಕ್ರವಾರ ಬೆಳಗಿನ ಜಾವ ವಿಧಿವಶರಾದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು. ಅವರು ಪತಿ ಡಾ.ವಿ.ಎಸ್. ಆರಾಧ್ಯಮಠ, ಪುತ್ರ ವೀರೇಶ ಆರಾಧ್ಯಮಠ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. Share on: WhatsApp

ಸಿನಿಮಾ

ಹಿರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್ ನಿಧನ

ನಾಗ್ಪುರ prajakiran.com : ಜನಪ್ರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್(79) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಮಹಾರಾಷ್ಟ್ರದ ನಾಗ್ಪುರದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ. ರಾಮ್​ ಲಕ್ಷ್ಮಣ್ ಅವರು ‘ಹಮ್ ಆಪ್ಕೆ ಹೈ ಕೌನ್’ ಚಿತ್ರ ಸೇರಿದಂತೆ ಹಿಂದಿ, ಮರಾಠಿ ಮತ್ತು ಭೋಜ್​ಪುರಿ ಬಾಷೆಯ 150ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು. ಒಂದಾನೊಂದು ಕಾಲದಲ್ಲಿ ಅವರ ಹಾಡುಗಳು ಸುಪರ್ ಡುಪರ್ ಹಿಟ್ ಆಗಿ,ಸಂಗೀತಾಸಕ್ತರ ಮನಸೊರೆಗೊಂಡಿದ್ದವು Share on: WhatsApp