*ಒಟ್ಟು 882 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 332 ಜನ ಗುಣಮುಖ ಬಿಡುಗಡೆ* *521 ಸಕ್ರಿಯ ಪ್ರಕರಣಗಳು* ಇದುವರೆಗೆ 29 ಮರಣ ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ ಮತ್ತೇ ಹೊಸದಾಗಿ 50 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 882 ಕ್ಕೆ ಏರಿದೆ. ಇದುವರೆಗೆ 332 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 521 ಪ್ರಕರಣಗಳು ಸಕ್ರಿಯವಾಗಿವೆ.ಅಲ್ಲದೆ, ಈವರೆಗೆ ಚಿಕಿತ್ಸೆ ಫಲಿಸದೆ ಒಟ್ಟು 29 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ […]
Author: PK Team
ವಿಜಯಪುರ ಎಸ್ಪಿ ಕಚೇರಿ, ಗ್ರಾಮೀಣ ಪೊಲೀಸ್ ಠಾಣೆ ಸೀಲ್ ಡೌನ್
ವಿಜಯಪುರ prajakiran.com : ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯ ಎ ಎಸ್ ಐ ಒಬ್ಬರಿಗೆ ಕರೋನಾ ಬಂದ ಹಿನ್ನಲೆಯಲ್ಲಿ ಎಸ್ಪಿ ಕಚೇರಿಯನ್ನೇ ಸೀಲ್ ಡೌನ್ ಮಾಡಲಾಗಿದೆ. ಅದೇರೀತಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಕಾನ್ಸಟೇಬಲ್ ಒಬ್ಬರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಕರೋನಾ ರಣಕೇಕೆ ಹಾಕುತ್ತಿದ್ದು, ಕೊರೊನಾ ವಾರಿಯರ್ಸ್ ಆಗಿರುವ ಪೊಲಿಸ್ ಇಲಾಖೆಗೂ ಇದೀಗ ಕೊರೊನಾ ಭಯ ಶುರುವಾಗಿದೆ. ಈಗಾಗಲೇ ಎಸ್ಪಿ […]
ಚಿಕಿತ್ಸೆ ನಿರಾಕರಿಸಿದಕ್ಕೆ ರೋಗಿಯೊಂದಿಗೆ ವಿಜಯಪುರ ಡಿಸಿ ಕಚೇರಿಗೆ ಬಂದ ಕುಟುಂಬಸ್ಥರು…!
ವಿಜಯಪುರ prajakiran.com : ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ ಹಿನ್ನೆಲೆ ಕುಟುಂಬಸ್ಥರು ಕಾರ್ನಲ್ಲಿ ರೋಗಿಯೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ಜಮೀಲ್ ಅಹಮ್ಮದ್ ಎಂಬವರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಗುರುವಾರ ತಡ ರಾತ್ರಿ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆತಂದಿದ್ದಾರೆ. ರೋಗಿ ತೀವ್ರ ಉಸಿರಾಟದಿಂದ […]
ಹುಬ್ಬಳ್ಳಿ ಪೂರ್ವ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯಗೂ ಕರೊನಾ
ಹುಬ್ಬಳ್ಳಿ prajakiran.com : ಮಹಾಮಾರಿ ಕರೊನಾ ಕಾಟ ಜನಪ್ರತಿನಿಧಿಗಳಿಗೂ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಇದೆ. ಶುಕ್ರವಾರ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದಅಬ್ಬಯ್ಯಗೂ ಕೊರೊನಾ ಸೋಂಕು ತಗುಲಿದೆ. ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಹುಬ್ಭಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇವತ್ತು ಅವರ ವರದಿ ಕೈ ಸೇರಿದ್ದು ಕರೋನಾ ಸೋಂಕು ಪಾಸಿಟಿವ್ ಇರುವದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ […]
ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ 2 ಸಾವು, 50 ಜನರಿಗೆ ಕರೋನಾ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 50 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 882ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಚಿಕಿತ್ಸೆ ಫಲಿಸದೆ ಇಬ್ಬರು ಸಾವನ್ನಪ್ಪಿದ್ದರೆ, 18 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ವಿವರಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜು.10 […]
ರಾಜ್ಯದಲ್ಲಿ ಶುಕ್ರವಾರ ಕರೋನಾಕ್ಕೆ 57 ಸಾವು, 2313 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 57 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2313 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 33418 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 1003 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 13836 ಜನ ಗುಣಮುಖರಾಗಿದ್ದು, 19035 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 472 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]
ಧಾರವಾಡದ ಕೋವಿಡ್ ಆಸ್ಪತ್ರೆಗಳ ಎಲ್ಲ ಒಳರೋಗಿಗಳಿಗೆ ಆ್ಯಂಟಿಜನ್ ಪರೀಕ್ಷೆ
ಧಾರವಾಡ prajakiran.com : ಸರ್ಕಾರದಿಂದ ಜಿಲ್ಲೆಗೆ ೩,೩೦೦ ಆ್ಯಂಟಿಜನ್ ಪರೀಕ್ಷಾ ಕಿಟ್ಗಳು ಬರುತ್ತಿವೆ. ಕಿಮ್ಸ್, ಎಸ್ಡಿಎಂ, ಜಿಲ್ಲಾಸ್ಪತ್ರೆ ಸೇರಿದಂತೆ ಅಗತ್ಯವಿರುವ ಇತರೆ ಆಸ್ಪತ್ರೆಗಳಲ್ಲಿ ದಾಖಲಾಗುವ ಇತರೆ ಸಾಮಾನ್ಯ ಒಳ ರೋಗಿಗಳನ್ನು ಆ್ಯಂಟಿಜನ್ ಪರೀಕ್ಷೆಗೆ ಒಳಪಡಿಸಲು ಅನುಕೂಲವಾಗಲಿದೆ. ಈ ಪರೀಕ್ಷೆಯಿಂದ ಕೋವಿಡ್ನ ತಪಾಸಣಾ ವರದಿ ತ್ವರಿತವಾಗಿ ಕೆಲವೇ ಗಂಟೆಗಳಲ್ಲಿ ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೀವ್ರ ನೆಗಡಿ, […]
ಬೆಳಗಾವಿ ವಿಭಾಗದ ೭೪ ಸಾವಿರ ಶಿಕ್ಷಕರಿಗೆ ಆನ್ಲೈನ್ ತರಬೇತಿ
ಧಾರವಾಡ prajakiran.com : ಕೊರೋನಾ ಕಂಟಕದಿಂದ ಕುಂಠಿತವಾಗಿರುವ ಶೈಕ್ಷಣಿಕ ಚಟುವಟಿಕೆಗಳನ್ನು ಮತ್ತೆ ಚುರುಕುಗೊಳಿಸಲು ವಾಯವ್ಯ ಕರ್ನಾಟಕ ಭಾಗದ ೯ ಜಿಲ್ಲೆಗಳಲ್ಲಿ ಆನ್ಲೈನ್ ಮೂಲಕ ಒಟ್ಟು ಸುಮಾರು ೭೪ ಸಾವಿರ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ಬೋಧನಾ ಪುನಶ್ಚೇತನ ತರಬೇತಿಗಳನ್ನು ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ. ಬೆಳಗಾವಿ ವಿಭಾಗದ ೯ ಜಿಲ್ಲೆಗಳಲ್ಲಿರುವ ಒಟ್ಟು ಸುಮಾರು ೫೬ ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ಹಾಗೂ ವಿಭಾಗದ […]
ಧಾರವಾಡ ಜಿಲ್ಲೆಯಲ್ಲಿ ಜುಲೈ ೧೩ ರಿಂದ ಎಸ್ಎಸ್ಎಲ್ಸಿ ಮೌಲ್ಯಮಾಪನ
ಧಾರವಾಡ prajakiran.com : ಜೂನ್/ಜುಲೈ -೨೦೨೦ ರ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯವು ಇದೇ ಜುಲೈ ೧೩ ರಿಂದ ಪ್ರಾರಂಭವಾಗಲಿವೆ. ಧಾರವಾಡ ಜಿಲ್ಲೆಯ ಒಟ್ಟು ೧೦ ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ಫಲಿತಾಂಶವನ್ನು ಕಾತುರದಿಂದ ಕಾಯುತ್ತಿರುವ ಮಕ್ಕಳಿಗೆ ಬೇಗ ಫಲಿತಾಂಶ ನೀಡುವುದು ಮಹತ್ವದ ಜವಾಬ್ದಾರಿಯಾಗಿದೆ. ಎಲ್ಲ ಸರ್ಕಾರಿ/ಖಾಸಗಿ ಅನುದಾನಿತ/ ಅನುದಾನರಹಿತ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಲು ಉಪನಿರ್ದೇಶಕರು ಸೂಚಿಸಿದ್ದಾರೆ. ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿನಿತ್ಯ ಸ್ಯಾನಿಟೈಜೇಶನ್ ಮಾಡುವದರ ಜೊತೆಗೆ ಪ್ರತಿದಿನ ಕರ್ತವ್ಯದ ಮೇಲಿರುವ ಸಿಬ್ಬಂದಿಗಳಿಗೆ ಆರೋಗ್ಯ ತಪಾಣೆಗಾಗಿ ಆರೋಗ್ಯ ತಪಾಸಣಾ […]
ಧಾರವಾಡ ಜಿಲ್ಲೆಯ ಎಲ್ಲಾ ನಾಗರಿಕರು ತಹಶೀಲ್ದಾರ, ಎಸಿ ಕಚೇರಿ ಆನ್ ಲೈನ ನಲ್ಲಿ ಸಂಪರ್ಕಿಸಿ
ಧಾರವಾಡ prajakiran.com : ಜಿಲ್ಲೆಯಲ್ಲಿ ಕರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದರಿಂದ ಕೋವಿಡ್-೧೯ ನಿಯಂತ್ರಣ ಮಾಡಲು ಮತ್ತು ಸಾರ್ವಜನಿಕರ ಹಾಗೂ ಕಚೇರಿ ಸಿಬ್ಬಂದಿಗಳ ಆರೋಗ್ಯ ಕಾಪಾಡಲು ಕಂದಾಯ ಇಲಾಖೆಯ ಕೆಲವು ಸೌಲಭ್ಯಗಳನ್ನು ಇ-ಮೇಲ್ ಮತ್ತು ವಾಟ್ಸ್ಪ್ ಮೂಲಕ ನೀಡಲು ಕ್ರಮ ಕೈಗೊಂಡಿದೆ. ಸೇವೆಗಳನ್ನು ಪಡೆಯಲು ಪದೆ ಪದೇ ಕಚೇರಿಗೆ ಅರ್ಜಿ ಸಲ್ಲಿಸಲು ಬರುತ್ತಿರುವುದರಿಂದ ಸಾರ್ವಜನಿಕರ ಹಾಗೂ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ತಹಶೀಲ್ದಾರ ಕಛೇರಿಗೆ ವಿವಿಧ ಕೆಲಸಗಳಿಗಾಗಿ ಅರ್ಜಿ ಸಲ್ಲಿಸುವವರು tahasildardwd@gmail.com […]