prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಕೊಗನೋಳಿ ಚೆಕ್ ಪೋಸ್ಟ್ ನಲ್ಲಿದ್ದ ಹಾಸನ ಜಿಲ್ಲೆಯ 4 ಪೊಲೀಸರಲ್ಲಿ ಕರೋನಾ ಸೋಂಕು ಪತ್ತೆ

ಬೆಳಗಾವಿ prajakiran.com : ಕೊಗನೋಳಿ ಚೆಕ್ ಪೋಸ್ಟ್‍ನಲ್ಲಿ ಕರ್ತವ್ಯದಲ್ಲಿದ್ದ ಹಾಸನ ಜಿಲ್ಲೆಯ 4 ಪೊಲೀಸರಲ್ಲಿ ಕರೋನಾ ಸೋಂಕು ಪತ್ತೆಯಾಗಿರುವುದು ನಿಪ್ಪಾಣಿಯಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರ ರಾಜ್ಯದಿಂದ ಕರ್ನಾಟಕ ಪ್ರವೇಶಿಸುತ್ತಿರುವ ಜನರನ್ನು ನಿಯಂತ್ರಣ ಮಾಡಲು ಹಾಗೂ ಅವರವರ ಜಿಲ್ಲೆಗಳಿಗೆ ತೆರಳಿ ಕ್ವಾರೆಂಟನ್‍ನಲ್ಲಿಡಲು ದೃಷ್ಟಿಯಿಂದ ಬೆಳಗಾವಿ ಆಡಳಿತ ಸರ್ಕಾರಕ್ಕೆ ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು, […]

ರಾಜ್ಯ

ಬುಧವಾರ ಒಂದೇ ದಿನ 122 ಕೇಸ್ ಪತ್ತೆ : ಕಲಬರುಗಿ 28, ಯಾದಗಿರಿ 16, ಹಾಸನ 14, ಬೀದರನಲ್ಲಿ 13 ಪ್ರಕರಣ

ಬೆಂಗಳೂರು prajakiran.com :  ರಾಜ್ಯದಲ್ಲಿ ಬುಧವಾರವೂ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ 122 ಕೇಸ್ ಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಹೆಲ್ತ್ ಬುಲೇಟಿನ್ ತಿಳಿಸಿದೆ. ಆ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ2405ಕ್ಕೆ ಏರಿದೆ. ಈ ಪೈಕಿ  25 ಮಕ್ಕಳಿಗೆ ಕರೋನಾ ಅಟ್ಯಾಕ್ ಮಾಡಿದೆ. ಅದರಲ್ಲೂ 15 ವರ್ಷದೊಳಗಿನ 25 ಮಕ್ಕಳಿಗೆ ಕರೋನಾ ಕಾಣಿಸಿಕೊಂಡಿರುವುದು ಪೋಷಕರಿಗೆ ಆತಂಕ ತಂದಿದೆ. ಇದರಲ್ಲಿ ಯಾದಗಿರಿಯ ಒಂದು ವರ್ಷದ ಮಗು, ಬೆಳಗಾವಿಯಲ್ಲಿ ಎರಡು ವರ್ಷದ ಹೆಣ್ಣು ಮಗು ಹಾಗೂ […]

ರಾಜ್ಯ

ಧಾರವಾಡ ಜಿಲ್ಲೆಯ ಮಾವು ಬೆಳೆಗಾರ ರೈತರ ನೆರವಿಗೆ ಧಾವಿಸಬೇಕಾದ ಎಪಿಎಂಸಿ ಜಾಣಕುರುಡು

ಧಾರವಾಡ prajakiran.com :  ಲಾಕ್ ಡೌನ್ ನಿಂದ ತತ್ತರಿಸಿ ಹೋಗಿರುವ ಧಾರವಾಡ ಜಿಲ್ಲೆಯ ಮಾವು ಬೆಳೆಗಾರ ರೈತರ ನೆರವಿಗೆ ಧಾವಿಸಬೇಕಾದ ಧಾರವಾಡ ಎಪಿಎಂಸಿ ಕಾರ್ಯದರ್ಶಿ ಹಾಗೂ ಧಾರವಾಡ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು ಜಾಣಕುರುಡುತನ ತೋರಿಸುತ್ತಿದ್ದಾರೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಹೆಚ್. ಕೋರವರ ಆಪಾದಿಸಿದ್ದಾರೆ. ಮಾವಿನ ಹಣ್ಣಿನ ದಲಾಲಿಗಳ ಹಗಲು ದರೋಡೆ ಕುರಿತು ಮೇ 20ರಂದು ಲಿಖಿತ ದೂರು ನೀಡಿದರೂ ಕೂಡ ಅವರ ವಿರುದ್ದ ಶಿಸ್ತುಕ್ರಮಕ್ಕೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿರುವುದು ಬೇಸರದ ಸಂಗತಿ. ಪ್ರತಿಯೊಬ್ಬ ರೈತರ […]

ರಾಜ್ಯ

ಕೇವಲ 5 ಸಾವಿರಕ್ಕೆ 5 ದಿನಗಳ ಮಗುವನ್ನೇ ಮಾರಿದ ಪಾಪಿ ತಾಯಿ ….! : ಹೊನ್ನಾಳಿ ಸರಕಾರಿ ಆಸ್ಪತ್ರೆ ಸಿಬ್ಬಂದಿ ಶಾಮೀಲು

ದಾವಣಗೆರೆ prajakiran.com : ಐದು ದಿನಗಳ ಹಿಂದೆಯಷ್ಟೇ ಹೆತ್ತ ಹಸುಗೂಸನ್ನು ಕೇವಲ 5 ಸಾವಿರಕ್ಕೆ ತಾಯಿಯೇ ಮಾರಾಟ ಮಾಡಿದ ಹೃದಯ ವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಹೋನ್ನಾಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ ವಿರುದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂರು ದಾಖಲಿಸಿದ್ದು, ಆಕೆಗೆ ಸಹಕರಿಸಿದ ಆರೋಪದ ಮೇಲೆ ಆಸ್ಪತ್ರೆ ಸಿಬ್ಬಂದಿ ಸೇರಿ ಆರು ಜನರ ವಿರುದ್ದ ಪ್ರಕರಣ ದಾಖಲಾಗಿದೆ. ಮಗು ಖರೀದಿಸಿದ ಆರೋಪದ ಮೇಲೆ ಲಾವಣ್ಯ,ಅಣ್ಣೇಶ, ಮಧ್ಯಸ್ಥಿಕೆ ವಹಿಸಿದ ಶುಶ್ರೂಷಕ […]

ರಾಜ್ಯ

ಬ್ರಹ್ಮಾಂಡ ಗುರೂಜಿ ವಿರುದ್ದ ಪ್ರಕರಣ ದಾಖಲು

ಕೊಡಗು prajakiran.com : ಕೊಡಗಿನಲ್ಲಿ ಬರುವ ದಿನಗಳಲ್ಲಿ ಭಾರಿ ಭೂಕಂಪವಾಗುತ್ತದೆ. ಇದರಿಂದಾಗಿ ಇಡೀ ಊರು ನೆಲಸಮವಾಗುತ್ತದೆ ಎಂದು ಭಾರೀ ಭವಿಷ್ಯ ನುಡಿದಿದ್ದ ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ ಅವರ ವಿರುದ್ದ ಕೊನೆಗೂ ಪ್ರಕರಣ ದಾಖಲಾಗಿದೆ. ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿರುವ ಕೊಡಗು ಬೆಳೆಗಾರರ ಒಕ್ಕೂಟ ಅವರ ವಿರುದ್ದ ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು   ಮಾಡಿದ್ದಾರೆ. ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ ಅವರು ಸೋಮವಾರವಷ್ಟೇ […]

ರಾಜ್ಯ

ಧಾರವಾಡದಲ್ಲಿ ಲಾಕಡೌನ್  ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದ 22 ಜನರ ವಿರುದ್ದ ಪ್ರಕರಣ

ಧಾರವಾಡ prajakiran.com :  ಲಾಕಡೌನ್  ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡದ ರಾಜನಗರ ಶಿವಳ್ಳಿ ಪ್ಲಾಟ್ ಮುಕ್ತಾಯ ಹಂತದಲ್ಲಿ ಇರುವ ಹಜರತ ನಿಜಾಮೋದ್ದೀನ್ ಮದರಸಾದಲ್ಲಿ ಲಾಕಡೌನ್ ನಿಯಮ‌ ಉಲ್ಲಂಘಿಸಿ ಸಾಮೂಹಿಕವಾಗಿ ನಮಾಜ್ ಮಾಡಿರುವ ಘಟನೆ ನಡೆದಿದೆ. ಕರೋನಾ ಹಿನ್ನಲೆಯಲ್ಲಿ ದೇಶದ್ಯಾಂತ ಮಂದಿರ, ಮಸೀದಿ ಹಾಗೂ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನಿರಾಕರಿಸಿ, ನಿರ್ಬಂಧ ಹೇರಲಾಗಿದೆ. ಈ ಸಂಬಂಧ ಕಟ್ಟು ನಿಟ್ಟಿನ ಸೂಚನೆ ಇದ್ದರೂ ಸಹ ಜಿಲ್ಲಾಡಳಿತ ಹಾಗೂ […]

ಸಿನಿಮಾ

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4ರ ವಿಜೇತೆ ಮೆಬಿನಾ ಮೈಕಲ್ ದುರ್ಮರಣ

ಮಂಡ್ಯ prajakiran.com : ಕಿರುತೆರೆಯಲ್ಲಿ ಭಾರೀ ಸದ್ದು ಮಾಡಿದ್ದ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4ರ ವಿಜೇತೆ ಮೆಬಿನಾ ಮೈಕಲ್ ದುರ್ಮರಣವನ್ನಪ್ಪಿದ್ದಾರೆ. ಟ್ರಾಕ್ಟರ್-ಕಾರು ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮಂಡ್ಯಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿ ರಾ.ಹೆ.75 ರಲ್ಲಿ ನಡೆದ ಅಪಘಾತ ಇದಾಗಿದೆ. ಮಂಗಳವಾರ ಸಂಜೆ 4.30 ರ ವೇಳೆ‌ಗೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ […]

ಅಪರಾಧ

ಬೆಂಗಳೂರಿನ ರೌಡೀಶೀಟರ್ ಹಿದಾಯತ್ ಖಾನ್ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು prajakiran.com :  ರೌಡೀಶೀಟರ್ ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯ ಲಗ್ಗೆರೆ ಬಳಿ ಸಂಜೆ 4:30ರ ಸುಮಾರಿಗೆ  ಈ ಮಾರಣಾಂತಿಕ ಹಲ್ಲೆ ನಡೆದಿದೆ. ಡಿ.ಜೆ ಹಳ್ಳಿ ನಿವಾಸಿ ಹಿದಾಯತ್ ಖಾನ್ ಎಂಬಾತನೇ ಹಲ್ಲೆಗೊಳಗಾದ ರೌಡೀಶೀಟರ್ ಆಗಿದ್ದಾನೆ. ಮೂರು ನಾಲ್ಕು ಜನರ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದ್ದು. ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಲಾಗಿದೆ. ಇತ್ತೀಚೆಗೆ ಜೈಲಿನಿಂದ ಹೊರಬಂದಿದ್ದ ಹಿದಾಯತ್ ಖಾನ್ ಕೈ, ಕಾಲು ಮುಖವೆಲ್ಲಾ […]

ಅಪರಾಧ

ಲಾಕ್ ಡೌನ್ ಎಫೆಕ್ಟ್ : ಸಾಲಭಾದೆ ತಾಳಲಾರದೇ ಬಾಗಲಕೋಟೆ ಜಿಲ್ಲೆಯ ಲಾರಿ ಚಾಲಕ ಆತ್ಮಹತ್ಯೆ

ಹುಬ್ಬಳ್ಳಿ prajakiran.com : ಲಾಕ್ ಡೌನ್ ಎಫೆಕ್ಟ್ ನಿಂದ ಉಂಟಾದ ನಿರುದ್ಯೋಗ ಸಮಸ್ಯೆ ಹಾಗೂ ಸಾಲಭಾದೆ ತಾಳಲಾರದೇ ಲಾರಿ ಚಾಲಕನೊಬ್ಬ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಯ ವಿಜಯಪುರ ರಸ್ತೆಯ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರೇವಡಿಹಾಳ ಗ್ರಾಮದ ದುರ್ಗೇಶ ರಾಮಪ್ಪ ದೊಡ್ಡಮನಿ(೨೪) ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರು ಎಂದು ಗೊತ್ತಾಗಿದೆ. ಲಾರಿ ಚಾಲಕನಾಗಿದ್ದ ಈತ ಲಾಕ್ ಡೌನ್ ಪರಿಣಾಮದಿಂದ ನಿರುದ್ಯೋಗಿ ಆಗಿದ್ದ. ಇದರಿಂದ ಬೆಂಗಳೂರು ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದನು ಎನ್ನಲಾಗಿದೆ. […]

ರಾಜ್ಯ

ದೇವಸ್ಥಾನಗಳಿಗೆ ತಟ್ಟಿದ ಲಾಕ್ ಡೌನ್ ಎಫೆಕ್ಟ್  : ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ 6 ಕೋಟಿ  ನಷ್ಟ

ಬೆಳಗಾವಿ prajakiran.com : ಕರೋನಾ ಲಾಕ್ ಡೌನ್ ಎಫೆಕ್ಟ್ ದೇಶದ ಹಾಗೂ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಿಗೂ ತಟ್ಟಿದೆ. ಇದರಿಂದಾಗಿ ದೇವಸ್ಥಾನಗಳಿಗೆ ಕೋಟ್ಯಾಂತರ ರೂಪಾಯಿ ನಷ್ಟ ಆಗಿರುವುದು ಬೆಳಕಿಗೆ ಬರುತ್ತಲೇ ಇದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಕೋಟ್ಯಾಂತರ ಜನರ ಆರಾಧ್ಯ ದೈವವಾಗಿರುವ ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆದಾಯಕ್ಕೂ ಪೆಟ್ಟು ಬಿದ್ದಿದೆ. ಆದಿಶಕ್ತಿಯ 64 ಶಕ್ತಿಪೀಠಗಳಲ್ಲಿ ಒಂದಾಗಿರುವ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಮೂರು ತಿಂಗಳಲ್ಲಿಯೇ ಬರೋಬ್ಬರಿ 6 ಕೋಟಿ […]