ಬೆಂಗಳೂರು Prajakiran.com : ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಈ ಲಾಕ್ಡೌನ್ ನಿಂದಾಗಿ ತೊಂದರೆಯಾಗುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ಸಾರಿಗೆ ಇಲಾಖೆಯಿಂದ ಈ ಪರಿಹಾರ ನೀಡಲು ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಮೇ. 27 ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು.
ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್ ಗಳಿಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುವುದು.
ಬಡ ಚಾಲಕರ ನೆರವಿಗೆ ಮುಂದಾಗಿರುವ ನಮ್ಮ ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.