ಧಾರವಾಡ prajakiran.com ಮಾ.31:
ಚಂಡಿಗಡದಲ್ಲಿ ಇಚೆಗೆ ಜರುಗಿದ ಸರಕಾರಿ ನೌಕರರ ರಾಷ್ಟ್ರೀಯ ಮಟ್ಡದ ಕುಸ್ತಿ ಪಂದ್ಯಾವಳಿಯಲ್ಲಿ ಶಿಕ್ಷಕಿ ಸರಸ್ವತಿ ಅವರು ಭಾಗವಹಿಸಿ, ಪ್ರಶಸ್ತಿ ಗಳಿಸಿದ್ದಾರೆ.
ಪ್ರಸ್ತುತ ಜಿಲ್ಲೆಯ ನವಲಗುಂದ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಧಾಲೆ-04 ರಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸರಸ್ವತಿ ಲಕ್ಷ್ಮಣ ಸುಣಗಾರ ಅವರು ಸರಕಾರಿ ನೌಕರರ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಬಹುಮಾನ ಗಳಿಸಿದ್ದರು.
ಇಚೆಗೆ ಚಂಡಿಗಡದಲ್ಲಿ ಜರುಗಿದ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ 50 ಕೆ.ಜಿ ತೂಕದ ಕುಸ್ತಿ ವಿಭಾಗದಲ್ಲಿ ಆಡಿ ಪ್ರಶಸ್ತಿ ಗಳಿಸಿದ್ದಾರೆ. ಅವರ ಈ ಸಾಧನೆಗೆ ಅಭಿನಂದನೆಗಳನ್ನು ತಿಳಿಸಿರುವ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು, ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ನೇತೃತ್ವದಲ್ಲಿ ನಿನ್ನೆ ಸಂಜೆ ಸಂಘದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನಕಾರ್ಯದರ್ಶಿ ಎಸ್.ಜಿ.ಸುಬ್ಬಾಪುರಮಠ, ಗೌರವಾಧ್ಯಕ್ಷ ರಮೇಶ ಲಿಂಗದಾಳ, ಕಾರ್ಯದರ್ಶಿ ಮಂಜುನಾಥ ಯಡಹಳ್ಳಿ ಹಾಗೂ ಇತರ ಪದಾಧಿಕಾರಿಗಳು ಇದ್ದರು.