ಧಾರವಾಡ prajakiran.com : ಕೋವಿಡ್ ಸರಪಳಿ ತುಂಡರಿಸಲು ಜನಜಾಗೃತಿಯೇ ಮುಖ್ಯವಾಗಿರುವದರಿಂದ ಜಿಲ್ಲಾಡಳಿತ ಹಾಗೂ ಅರಣ್ಯ ,ಅಬಕಾರಿ ಇಲಾಖೆಯ ಸಹಯೋಗದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜನಜಾಗೃತಿ ಚಟುವಟಿಕೆಗಳು ಜರುಗುತ್ತಿವೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಕಲಕೇರಿ, ದೇವಗಿರಿ ಹಾಗೂ ಬೆಣಚಿ ಗ್ರಾಮಗಳ ಅರಣ್ಯ ವಲಯ ಪ್ರದೇಶಗಳಲ್ಲಿ ಕೋವಿಡ್ ಜಾಗೃತಿ ಚಟುವಟಿಕೆಗಳನ್ನು ನಡೆಸಿದರು.
ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್, ಬಳಸುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮಹತ್ವವನ್ನು ಗ್ರಾಮಸ್ಥರಿಗೆ ವಿವರಿಸಿದರು.
ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ,ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ, ವಲಯ ಅರಣ್ಯ ಅಧಿಕಾರಿ ವಿಜಯಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಮನಕೂರ್ ಮತ್ತಿತರ ಅಧಿಕಾರಿಗಳು ಜಾಗೃತಿ ಕಾರ್ಯಗಳನ್ನು ಕೈಗೊಂಡಿದ್ದಾರೆ.