ಧಾರವಾಡ prajakiran.com :
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ
ವಿನಯ ಕುಲಕರ್ಣಿ ಬಂಧನ ಹಿನ್ನೆಲೆಯಲ್ಲಿ
ವಿನಯ ಕುಲಕರ್ಣಿ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ ಭೇಟಿ ನೀಡಿ
ಮನೆಯವರೊಂದಿಗೆ ಮಾತುಕತೆ ನಡೆಸಿದರು.
ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಧಾನ ಪರಿಷತ್ ಸದಸ್ಯ
ಬಳಿಕ ಹರಿಪ್ರಸಾದ ಹೇಳಿಕೆ ನೀಡಿದ್ದು,
ವಿನಯ ಬಂಧನ ರಾಜಕೀಯ ಪ್ರೇರಿತ ಎಂದು ಹೇಳಿದರು.
ಸಿಬಿಐ ತನಿಖೆಯ ಅವಶ್ಯಕತೆ ಇಲ್ಲ ಅಂದಿದ್ದ ಹೈಕೋರ್ಟ್, ಸುಪ್ರೀಂ ಕೋರ್ಟ್. ಅಲ್ಲದೆ,
ಪೊಲೀಸರ ತನಿಖೆ ಅಂತಿಮ ಹಂತದಲ್ಲಿತ್ತು.
ಅದರೆ ರಾಜ್ಯ ಸರಕಾರ ತನಿಖೆಗೆ ಸಿಬಿಐ ಗೆ ನೀಡಿದೆ.
ಇದೊಂದು ರಾಜಕೀಯ ಪ್ರೇರಿತ ಎಂದು ದೂರಿದರು.
ಕೇಸುಗಳು ಕೋರ್ಟ್ ನಲ್ಲಿದ್ದಾಗ ಚರ್ಚೆ ಮಾಡೋದಿಲ್ಲ
ಅದು ನ್ಯಾಯಾಂಗ ನಿಂದನೆ ಆಗುತ್ತೆ
ಆದರೂ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಹೀಗಾಗುತ್ತಿವೆ.
ಬಿಜೆಪಿಯವರು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ವಿರೋಧಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿನಯ, ಪ್ರಲ್ಹಾದ ಜೋಶಿ ವಿರುದ್ಧ ಸ್ಪರ್ಧೆ ಮಾಡುತ್ತಾರೆ.
ಈ ಹಿನ್ನೆಲೆಯಲ್ಲಿ ವಿನಯ ವಿರುದ್ಧ ಸಿಬಿಐ ಅಸ್ತ್ರ ಬಳಸಲಾಗಿದೆ.
ಅದಕ್ಕೆ ಇಂಥ ಕೆಲಸ ಮಾಡಿಸುತ್ತಿದ್ದಾರೆ
ದ್ವೇಷ ಸಾಧನೆಗೋಸ್ಕರ ಇಂಥ ಕೆಲಸ
ಇವರೇನು ಐದು ನೂರು ವರ್ಷ ಬದುಕುತ್ತಾರಾ?
ಬಿಜೆಪಿಯ ರಾಜಕೀಯ ಸಿದ್ಧಾಂತವೇ ಅಸೂಯೆ, ದ್ವೇಷ
ಇದನ್ನು ಸಾಧಿಸಲು ಇರೋದೇ ಬಿಜೆಪಿ.
ಬಿಜೆಪಿಯವರು ದಮನ ನೀತಿ ಅನುಸರಿಸುತ್ತಿದ್ದಾರೆ ಎಂದು ಗುಡುಗಿದರು.
ಇದನ್ನು ರಾಜಕೀಯವಾಗಿ ಎದುರಿಸಲು ಸಹ ನಾವು ಸಿದ್ಧ.
ಕಾಂಗ್ರೆಸ್ ಪಕ್ಷ ವಿನಯ ಪರ ಇದೆ
ಈ ಘಟನೆ ವಿರುದ್ಧ ನಾವು ಹೋರಾಡುತ್ತೇವೆ.
ಬಿಜೆಪಿ ಇಡಿ, ಸಿಬಿಐ ಗಳನ್ನ ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಅನ್ನೋದು ಗೊತ್ತಿದೆ ಎಂದು ಹೇಳಿದರು.
ಶಿರಾ, ಆರ್.ಆರ್. ನಗರ ಬೈ ಎಲೆಕ್ಷನ್ ವಿಚಾರ ಕುರಿತು
ಎಕ್ಸಿಟ್ ಪೋಲ್ ಎಕ್ಸಾಟ್ ಪೋಲ್ ಅಲ್ಲ.
ಆರ್.ಆರ್.ನಗರದಲ್ಲಿ ಗೆದ್ದಿದ್ದು ಮುನಿರತ್ನ, ಬದಲಿಗೆ ಬಿಜೆಪಿಯಲ್ಲ
ಮುನಿರತ್ನ ಕೊವಿಡ್ ವೇಳೆಯಲ್ಲಿ ಕೆಲಸ ಮಾಡಿದ್ದಾರೆ.
ಅವರೊಂದಿಗೆ ಕೈ ಕಾರ್ಯಕರ್ತರು ಕೆಲಸ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮುನಿರತ್ನ ಗೆದ್ದಿದ್ದಾರೆ.
ನಾವು ಹೀನಾಯವಾಗಿಯೇನೂ ಸೋತಿಲ್ಲ.
ರಾಜಕಾರಣದಲ್ಲಿ ಸೋಲು, ಗೆಲುವು ಇರೋದೇ ಎಂದು ಹೇಳಿದರು.