ರಾಜ್ಯ

ಸಿಎಂ ಬಿ ಎಸ್ ವೈ ಭೇಟಿ ಮಾಡಿದ ಬಿ.ಎಲ್. ಸಂತೋಷ

ಬೆಂಗಳೂರು prajakiran.com : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಶನಿವಾರ ಬೆಳಗ್ಗೆ ಸಿಎಂ ಬಿ ಎಸ್ ವೈ ಅವರ ಕಾವೇರಿ ನಿವಾಸಕ್ಕೆ ಭೇಟಿ ಮಾಡಿ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಗಣೇಶ ಚತುರ್ಥಿ ಸಂದರ್ಭದಲ್ಲಿಯೇ ಬಿ.ಎಲ್. ಸಂತೋಷ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಮಾಡಿರುವುದು ರಾಜ್ಯ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ.

ಬಿ.ಎಲ್. ಸಂತೋಷ ಅವರ ಈ ಭೇಟಿ ಹಿಂದೆ ರಾಜಕೀಯ ಕಾರಣಗಳಿವೆಯಾ, ಅಥವಾ ಕೇವಲ ಹಬ್ಬದ ಶುಭಾಶಯಕ್ಕಷ್ಟೇ ಸಿಮೀತವಾಗಿದೆಯಾ ಎಂಬ ಗುಸು ಗುಸು ಬಿಜೆಪಿಯ ವಲಯದಲ್ಲಿಯೇ ಶುರುವಾಗಿದೆ.

ನಿನ್ನೇಯಷ್ಟೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರನ್ನು ರಾಜ್ಯ ಬಿಜೆಪಿ ಕಚೇರಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದರು.

ಇದೇ ವೇಳೆ ಸಿಎಂ ಯಡಿಯೂರಪ್ಪ ಕುಟುಂಬ ಸರಳ ಗಣೇಶೋತ್ಸವ ಆಚರಿಸಿ, ಸಂಭ್ರಮಿಸಿದೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *