ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ಡಿ. 9ಕ್ಕೆ ಮುಂದೂಡಿಕೆ

ಧಾರವಾಡ Prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಸಿಬಿಐ ಕೋರ್ಟ್ ಡಿಸೆಂಬರ್ 9 ಕ್ಕೆ ಮುಂದೂಡಿದೆ.

ಧಾರವಾಡ ಜಿಲ್ಲೆಯ ಮೂರನೇ ಹೆಚ್ಚುವರಿ ಹಾಗೂ ವಿಶೇಷ ಸಿಬಿಐ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ವಿನಯ ಕುಲಕರ್ಣಿ ಪರ ವಾದ ಮಂಡಿಸಿದ ವಕೀಲ ಬಾಹುಬಲಿ ಧನವಾಡೆ, ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ದೂರು ಸಲ್ಲಿಕೆ ಆಗಿಲ್ಲ, ಈ ಪ್ರಕರಣದ ಯಾವುದೇ ಆರೋಪಿಗಳ ಜೊತೆಗೆ ನಾಲ್ಕು ತಿಂಗಳ ಮುಂಚೆಯಿಂದ ಸಂಪರ್ಕವಿಲ್ಲ.

ಒಬ್ಬನೇ ಒಬ್ಬ ಆರೋಪಿ ಜೊತೆಗೆ ನಂಟು ಹೊಂದಿಲ್ಲ ಎಂದು ಗಮನ ಸೆಳೆದರು.
ಅಲ್ಲದೆ, ಈ ಕೊಲೆ ಪ್ರಕರಣ ದಲ್ಲಿ ಮಾಜಿ ಸಚುವ ಎಚ್ ಕೆ ಪಾಟೀಲ ಹೆಸರು ಕೇಳಿ ಬಂದಿದೆ.

ಆದರೆ ಸಿಬಿಐ ಈವರೆಗೆ ಅವರ ವಿಚಾರಣೆ ನಡೆಸಿಲ್ಲ. ಸಿಬಿಐ ಈ ನಡೆ ದುರುದ್ದೇಶದಿಂದ ಕೂಡಿದೆ.
ಹೀಗಾಗಿ ಅವರಿಗೆ
ಜಾಮೀನು ಕೊಡಬೇಕು ಎಂದು ಮನವಿ ಮಾಡಿದರು.

ವಿನಯ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ಸಿಬಿಐ ಪರ ವಕೀಲರು ವಾದ ಮಂಡಿಸಲು ಅವಕಾಶ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 9 ಕ್ಕೆ ಮುಂದೂಡಿತು.

ಹೀಗಾಗಿ ಮತ್ತೆ ಡಿಸೆಂಬರ್ 9 ರವರೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *