ಬೆಂಗಳೂರು prajakiran. com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೊಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾ.10ಕ್ಕೆ ಮುಂದೂಡಿದೆ.
ಈ ಕುರಿತಂತೆ ಮಂಗಳವಾರ ಸಂಜೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್ ಅಸೋಸಿಯೇಟ್ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ಅವರು ಸುದೀರ್ಘ ವಾದವನ್ನು ಮಂಡಿಸಿದರು.
ಇನ್ನೂ ಇದಕ್ಕೆ ಪ್ರತಿಯಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಪರವಾಗಿ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿ ಅವರು ಪ್ರತಿವಾದ ಮಂಡಿಸಲು ಅವಕಾಶ ಕೋರಿದ್ದರಿಂದ ಮುಂದಿನ ವಿಚಾರಣೆ ಮಾ. 10ರಂದು ನಡೆಸುವುದಾಗಿ ನ್ಯಾಯಾಧೀಶರು ತಿಳಿಸಿದರು.
ಹೀಗಾಗಿ ಸಿಬಿಐ ಪರ ವಕೀಲರು ಮಂಡಿಸಿದ ವಾದವನ್ನು ಎತ್ತಿ ಹಿಡಿಯುತ್ತಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕು. ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿನ ತೀರ್ಪನತ್ತ ಎಲ್ಲರ ಚಿತ್ತ ನೆಟ್ಟಿದೆ.