ಬೆಂಗಳೂರು prajakiran.com : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡಿದೆ.
ಬುಧವಾರ ಈ ಕುರಿತು ತೀರ್ಪು ಪ್ರಕಟಿಸಿದ
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇನವಳ್ಳಿ ಈ ಆದೇಶ ಹೊರಡಿಸಿದರು.
ಸಿಬಿಐ ಪರ ಸುಪ್ರೀಂಕೋರ್ಟ್ ಅಸೋಸಿಯೇಟ್ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಮಂಡಿಸಿದ ಸುದೀರ್ಘವಾದ ಪ್ರತಿವಾದವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿ ಹಿಡಿದಿದೆ.
ಮಾಜಿ ಸಚಿವ ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಹಿಂದೆ ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡದ ಹೈಕೋರ್ಟ್ ಕೂಡ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಅರ್ಜಿಯನ್ನು ವಜಾಗೊಳಿಸಿದೆ.
ಇತ್ತೀಚೆಗಷ್ಟೇ ಈ ಪ್ರಕರಣ ಧಾರವಾಡದ ಸಿಬಿಐ ನ್ಯಾಯಾಲಯ ದಿಂದ
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನು ರಾಕೇಶ ರಂಜನ್ ಅವರ ನೇತೃತ್ವದ
ಸಿಬಿಐ ಅಧಿಕಾರಿಗಳ ತಂಡ ನ.5 ರಂದು ಬೆಳ್ಳಂ ಬೆಳಗ್ಗೆ ವಶಕ್ಕೆ ತೆಗೆದುಕೊಂಡು ಆನಂತರ ಸಂಜೆ ವೇಳೆಗೆ ಹೆಚ್ಚಿನ ವಿಚಾರಣೆ ನಡೆಸಿತ್ತು.
ಸದ್ಯ ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿದ್ದಾರೆ.