ಧಾರವಾಡ prajakiran.com :
ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರ ಮಾಡಿ
ಧಾರವಾಡ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿತು.
ಈ ಪ್ರಕರಣದಲ್ಲಿ 156 ಜನರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರ ಪೈಕಿ ಈಗಾಗಲೇ 8 ಜನ ಜಾಮೀನು ಪಡೆದಿದ್ದರು.
ಉಳಿದ 148 ಜನರ ಜಾಮೀನು ಅರ್ಜಿ ವಿಚಾರಣೆ ಮಾಡಿದ ಧಾರವಾಡ ಹೈಕೋರ್ಟ್ ನ್ಯಾಯಾಲಯದ ನ್ಯಾಯಮೂರ್ತಿ ಆರೋಪಿಗಳ ಪರ ವಕೀಲರ ವಾದ ಹಾಗೂ ರಾಜ್ಯ ಸರ್ಕಾರದ ಪರ ಹಿರಿಯ ವಕೀಲರಾದ ಶೀಲವಂತರ ಅವರ ಪ್ರತಿವಾದ ಆಲಿಸಿದರು.
ವಿಚಾರಣೆ ನಂತರ ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರ ಮಾಡಿದರು.
ಏ.16ರಂದು ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಎದುರು ದೊಡ್ಡ ಪ್ರಮಾಣದಲ್ಲಿ ಗಲಾಟೆ ನಡೆದಿತ್ತು.
ಪೊಲೀಸ್ ವಾಹನ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಅಂಗಡಿ,ಮಂದಿರದಲ್ಲಿ ನುಗ್ಗಿದ್ದನ್ನು ಇಲ್ಲಿ ಸ್ಮರಿಸಬಹುದು