ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿನ್ನು ಕೋರ್ಟ್ ವಜಾಗೊಳಿಸಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಹತ್ಯೆಯ ತನಿಖೆ ನಡೆಸುತ್ತಿರೋ ಸಿಬಿಐ ದಿನಕ್ಕೊಂದು ಆಘಾತಕಾರಿ ಅಂಶವನ್ನು ಹೊರಗೆ ಹಾಕುತ್ತಿದೆ.
ಅಲ್ಲದೆ, ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಬೇಕು. ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಈಗಾಗಲೇ ಈ ಪ್ರಕರಣದ ಸಾಕ್ಷ್ಯಿಗಳ ಮೇಲೆ ಒತ್ತಡ ಹೇರಿರುವ ಹಾಗೂ ನಾಶ ಮಾಡಿರುವ ಪ್ರಕರಣ ದಾಖಲಾಗಿದೆ ಎಂದು ನ್ಯಾಯಾಲಯದ ಗಮನ ಸೆಳೆದರು.
ಈ ಹಿನ್ನೆಲೆಯಲ್ಲಿ ಜಾಮೀನಿಗಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿರೋ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಡಿಸೆಂಬರ್ 9 ರಂದು ಸಿಬಿಐ ಹಾಗೂ ವಿನಯ ಪರ ವಕೀಲರ ವಾದವನ್ನು ಆಲಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಡಿ. 14 ರಂದು ತೀರ್ಪು ನೀಡೋದಾಗಿ ಹೇಳಿತ್ತು.
ಸೋಮವಾರ ಮಧ್ಯಾಹ್ನ ತೀರ್ಪು ಪ್ರಕಟಿಸಿದ ಕೋರ್ಟ್, ವಿನಯ ಕುಲಕರ್ಣಿಗೆ ಜಾಮೀನು ನೀಡಲು ನಿರಾಕರಿಸಿತು.
ಇದರಿಂದಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿಯೇ ಇನ್ನಷ್ಟು ದಿನ ಕಾಲ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.