ಧಾರವಾಡ prajakiran.com : ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ, ಭಕ್ತಾದಿಗಳ ಆರೋಗ್ಯ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಧಾರವಾಡ ಜಿಲ್ಲೆಯಲ್ಲಿರುವ ಮುಜರಾಯಿ ಹಾಗೂ ಮುಜರಾಯಿಯೇತರ ದೇವಸ್ಥಾನಗಳಲ್ಲಿ 500 ಕ್ಕಿಂತ ಹೆಚ್ಚಿಗೆ ಸಾರ್ವಜನಿಕರು, ಭಕ್ತಾದಿಗಳು ದೇವರ ದರ್ಶನಕ್ಕೆ ಸೇರುವುದು, ಧಾರ್ಮಿಕ ಆಚರಣೆ ಮಾಡುವುದು ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ.
ಆದರೆ ಆಯಾ ದೇವಸ್ಥಾನದ ದೈನಂದಿನ ಪೂಜಾ ಕಾರ್ಯಗಳನ್ನು ಅರ್ಚಕರು, ಪುರೋಹಿತರು ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದವರು ಮಾತ್ರ ಕೋವಿಡ್-19 ಮುಂಜಾಗೃತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಎಂಟು ಡೇಂಜರ್ ಜೋನ್ ಜಿಲ್ಲೆಯ ಪೈಕಿ ಧಾರವಾಡ ಜಿಲ್ಲೆ ಕೂಡ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಭಾರೀ ಮಹತ್ವ ಪಡೆದಿದೆ.