ಧಾರವಾಡ prajakiran. com : ಧಾರವಾಡದ ಶ್ರೀನಗರ ಸರ್ಕಲ್ ನಲ್ಲಿ ರಾತ್ರೋ ರಾತ್ರಿ ವಿಶ್ವ ಗುರು ಬಸವಣ್ಣನವರ ಮೂರ್ತಿಯನ್ನು ಮೊನ್ನೆ ಪ್ರತಿಷ್ಠಾಪಿಸಲಾಗಿತ್ತು.
ಇದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಉಪನಗರ ಪೊಲೀಸರ ತಲೆ ನೋವಿಗೆ ಕಾರಣವಾಗಿತ್ತು.
ಆ ಬಳಿಕ ಆ ಮೂರ್ತಿಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು.
ಇಂದು ಭಾನುವಾರ ಅದನ್ನು ಶ್ರೀನಗರ ಸರ್ಕಲ್ ಹಿರಿಯ ಮುಖಂಡರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಮರಳಿಸಿದ್ದರು.
ಈ ಹಿನ್ನೆಲೆಯಲ್ಲಿ ಮತ್ತೆ ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪಿಸಲು ಮಹಾನಗರ ಪಾಲಿಕೆ ಪರವಾನಿಗೆ ನೀಡಿದ್ದರಿಂದ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪಿಸಲಾಗಿದೆ.
ಅಲ್ಲದೆ, ಭಕ್ತಿ ಭಾವದಿಂದ ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆಯಲಾಯಿತು.
ಈ ಸಂದರ್ಭದಲ್ಲಿ ಗದಿಗೇಶ ಸುಣಗಾರ, ಚಂದ್ರು ಪೂಜಾರ(ಹಿರೇಮಠ) ಸೇರಿದಂತೆ ಅನೇಕ ಯುವಕರು ಉಪಸ್ಥಿತರಿದ್ದರು.