ಜಿಲ್ಲೆ

ಧಾರವಾಡದ ಶ್ರೀನಗರ ವೃತ್ತದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ ಮರುಸ್ಥಾಪಿಸಿ ಭಕ್ತಿ ಭಾವ ಮೆರೆದ ಯುವಕರು

ಧಾರವಾಡ prajakiran. com : ಧಾರವಾಡದ ಶ್ರೀನಗರ ಸರ್ಕಲ್ ನಲ್ಲಿ ರಾತ್ರೋ ರಾತ್ರಿ ವಿಶ್ವ ಗುರು ಬಸವಣ್ಣನವರ ಮೂರ್ತಿಯನ್ನು ಮೊನ್ನೆ ಪ್ರತಿಷ್ಠಾಪಿಸಲಾಗಿತ್ತು.

ಇದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಉಪನಗರ ಪೊಲೀಸರ ತಲೆ ನೋವಿಗೆ ಕಾರಣವಾಗಿತ್ತು.

ಆ ಬಳಿಕ ಆ ಮೂರ್ತಿಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು.

ಇಂದು ಭಾನುವಾರ ಅದನ್ನು ಶ್ರೀನಗರ ಸರ್ಕಲ್ ಹಿರಿಯ ಮುಖಂಡರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಮರಳಿಸಿದ್ದರು.

ಈ ಹಿನ್ನೆಲೆಯಲ್ಲಿ ಮತ್ತೆ ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪಿಸಲು ಮಹಾನಗರ ಪಾಲಿಕೆ ಪರವಾನಿಗೆ ನೀಡಿದ್ದರಿಂದ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪಿಸಲಾಗಿದೆ‌.

ಅಲ್ಲದೆ, ಭಕ್ತಿ ಭಾವದಿಂದ ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆಯಲಾಯಿತು.

ಈ ಸಂದರ್ಭದಲ್ಲಿ ಗದಿಗೇಶ ಸುಣಗಾರ, ಚಂದ್ರು ಪೂಜಾರ(ಹಿರೇಮಠ) ಸೇರಿದಂತೆ ಅನೇಕ ಯುವಕರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *