ರಾಜ್ಯ

ಧಾರವಾಡ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ ನಾಮಪತ್ರ ಸಲ್ಲಿಕೆ

ಧಾರವಾಡ prajakiran.com : ಧಾರವಾಡ ಪಶ್ಚಿಮ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ ಮಂಗಳವಾರ ಧಾರವಾಡ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮ ಪತ್ರ  ಸಲ್ಲಿಸಿದರು.

ನಾಮ ಪತ್ರ ಸಲ್ಲಿಕೆ ಮುನ್ನ ಜಗಜ್ಯೋತಿ ಬಸವೇಶ್ವರ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ, ಛತ್ರಪತಿ ಶಿವಾಜಿ ಮಹಾರಾಜ, ಡೆಪೂಟಿ ಚೆನ್ನಬಸಪ್ಪ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

 ನಂತರ ಕರ್ನಾಟಕ ಕಾಲೇಜು ಆವರಣದಿಂದ ಆಲೂರು ವೆಂಕಟರಾವ್ ಪುತ್ಥಳಿಯವರೆಗೆ  ಪದವೀಧರರೊಂದಿಗೆ ಆಗಮಿಸಿದರು.

ಈ ಸಂಧರ್ಭದಲ್ಲಿ ಮೃತ್ಯುಂಜಯ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ ಕಪಲಿ, ನ್ಯಾಯವಾದಿಗಳಾದ ಪ್ರಕಾಶ ಉಡಕೇರಿ ಸೇರಿದಂತೆ ಕರ್ನಾಟಕ ರಾಜ್ಯ ಪಧವೀದರರ ಸಂಘಟನೆ ಪದಾಧಿಕಾರಿಗಳು, ಪದವೀಧರರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *