ಧಾರವಾಡ prajakiran.com : ಧಾರವಾಡ ಪಶ್ಚಿಮ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ ಮಂಗಳವಾರ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಸಿದರು.
ನಾಮ ಪತ್ರ ಸಲ್ಲಿಕೆ ಮುನ್ನ ಜಗಜ್ಯೋತಿ ಬಸವೇಶ್ವರ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ, ಛತ್ರಪತಿ ಶಿವಾಜಿ ಮಹಾರಾಜ, ಡೆಪೂಟಿ ಚೆನ್ನಬಸಪ್ಪ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ನಂತರ ಕರ್ನಾಟಕ ಕಾಲೇಜು ಆವರಣದಿಂದ ಆಲೂರು ವೆಂಕಟರಾವ್ ಪುತ್ಥಳಿಯವರೆಗೆ ಪದವೀಧರರೊಂದಿಗೆ ಆಗಮಿಸಿದರು.
ಈ ಸಂಧರ್ಭದಲ್ಲಿ ಮೃತ್ಯುಂಜಯ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ ಕಪಲಿ, ನ್ಯಾಯವಾದಿಗಳಾದ ಪ್ರಕಾಶ ಉಡಕೇರಿ ಸೇರಿದಂತೆ ಕರ್ನಾಟಕ ರಾಜ್ಯ ಪಧವೀದರರ ಸಂಘಟನೆ ಪದಾಧಿಕಾರಿಗಳು, ಪದವೀಧರರು ಉಪಸ್ಥಿತರಿದ್ದರು.