ಮುಂಬಯಿ prajakiran.com : ಇಂಗ್ಲೆಂಡ್ ಪ್ರವಾಸಕ್ಕೆ ತೆರಳಬೇಕಿರುವ ಭಾರತೀಯ ಕ್ರಿಕೆಟಿಗರಿಗೆ ಮನೆ ಬಿಟ್ಟು ಹೊರಬರದಂತೆ ಬಿಸಿಸಿಐ ಎಚ್ಚರಿಕೆ ನೀಡಿದೆ.
ಯಾವುದೇ ಆಟಗಾರರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟರೆ ಅವರನ್ನು ತಂಡದಿಂದ ಕೈಬಿಡಲಾಗುವುದು.
ಆಟಗಾರರು ಕೊರೋನಾದಿಂದ ಗುಣಮುಖರಾಗಿ ಬಂದರೂ ಮತ್ತೆ ವಿಶೇಷ ವಿಮಾನ ವ್ಯವಸ್ಥೆ ಮಾಡುವುದಿಲ್ಲ ಎಂದು ಹೇಳಿದೆ.
ಜೂ.2 ರಂದು ಇಂಗ್ಲೆಂಡ್ಗೆ ಹೊರಡುವ ನಿರೀಕ್ಷೆ ಇದ್ದು, ಅದಕ್ಕೂ ಮುನ್ನ ಮುಂಬೈನಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ.
ಅಲ್ಲಿಯವರೆಗೂ ಎಲ್ಲರೂ ಸುರಕ್ಷಿತವಾಗಿದ್ದು, ಮನೆಯಿಂದ ಹೊರಹೋಗದಿರಿ ಎಂದು ಬಿಸಿಸಿಐ ಹೇಳಿದೆ.