ಬೆಂಗಳೂರು prajakiran.com : ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಮಾಡುತ್ತಿದ್ದ ಎಂಟು ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಎಂಟು ಮಂದಿಯಲ್ಲಿ ಇಬ್ಬರು ವೈದ್ಯರು ಕೂಡ ಇದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಮಾಹಿತಿ ನೀಡಿದ್ದರು. ಅಲ್ಲದೆ ಈ ಕುರಿತು ಸಿಎಂ ಗಮನ ಸೆಳೆದಿದ್ದರು
ಕೂಡಲೇ ಸಿಎಂ ಯಡಿಯೂರಪ್ಪ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದರು.
ಪೊಲೀಸರು ಈ ಬಗ್ಗೆ ಪ್ರಕರಣಗಳಲ್ಲಿ ಭಾಗಿಯಾದವರ ವಿಚಾರಣೆ ನಡೆಸಿ ಹೆಡೆಮುರಿ ಕಟ್ಟುತ್ತಿದೆ.
ಇದೀಗ ಈ ಪ್ರಕರಣ ಬಿಜೆಪಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.