ಎರಡು ಗುಂಪುಗಳ ನಡುವೆ ಗಲಾಟೆ : ಪೊಲೀಸ್ ಲಾಠಿ ಚಾರ್ಜ್
ಬೆಳಗಾವಿ prajakiran.com : ಗಡಿ ಜಿಲ್ಲೆ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಷ್ಠೆ ಸ್ಥಾಪನೆ ವಿವಾದ ಸರಕಾರದ ಮಟ್ಟದಲ್ಲಿ ಗಮನ ಸೆಳೇದರೂ ಸಮಸ್ಯೆ ಬಗೆಹರಿಯದ ಹಿನ್ನಲೆಯಲ್ಲಿ ಮಧ್ಯರಾತ್ರಿ ಮೂರು ಗಂಟೆಗೆ ಪ್ರತಿಮೆ ಸ್ಥಾಪಿಸಲಾಗಿದೆ.
30 ಯುವಕರು ರಾತ್ರೋ ರಾತ್ರಿ ಪ್ರತಿಮೆ ಸ್ಥಾಪಿಸಿದ್ದರಿಂದ ಬೆಳಗ್ಗೆ ಮರಾಠ ಸಮುದಾಯದ 300 ಜನ ಸೇರಿ ಪ್ರತಿಭಟನೆ ನಡೆಸಿದರು. ಈ ವೇಳೆ ಕಿಡಿಗೇಡಿಗಳು ಇನ್ನೊಂದು ಗುಂಪಿನ ಮೇಲೆ ಚಪ್ಪಲಿ
ತೂರಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತು. ಆಗ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಜನ ಎದ್ನೋ ಬಿದ್ದು ಅಂತ ಓಡಿಹೋದರು.
ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಅಲ್ಲದೆ, ಗ್ರಾಮದಲ್ಲಿ ಖಾಕಿ ರೌಂಡ್ಸ್ ಹೊಡೆಯುತ್ತಿದೆ. ಗುಂಪು ಗುಂಪಾಗಿ ಜನ ಸೇರದಂತೆ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಜಿಲ್ಲಾಡಳಿತವೇ ಸಮಸ್ಯೆ ಬಗೆಹರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶಜಾರಕಿಹೊಳಿ ಹೇಳಿದ್ದಾರೆ.
ಜಿಲ್ಲಾಡಳಿತವೇ ಇದರ ಹೊಣೆ ತೆಗೆದುಕೊಳ್ಳಬೇಕು. ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು,ಸಮುದಾಯದ ಮುಖಂಡರನ್ನ ಕರೆದು ಮಾತುಕತೆ ಮೂಲಕ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.