ಬೆಳಗಾವಿ prajakiran.com : ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದೆ. ಮಂಗಳವಾರ ರಾತ್ರಿಯಿಡಿ ಸುರಿದ ಮಳೆ ಇಂದು ಕೂಡ ಮುಂದುವರಿದಿದೆ.
ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ ಭಾಗಗಳಲ್ಲಿ ನಿರಂತರವಾಗಿದೆ. ಜಿಟಿ ಜಿಟಿ ಮಳೆ ಎಡೆ ಬಿಡದೆ ಸುರಿಯುತ್ತಿದೆ.
ಇದರಿಂದಾಗಿ ಜಿಲ್ಲೆಯ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೇ ನಿಸರ್ಗ ಚಂಡಮಾರುತ ಎಫೆಕ್ಟ್ ಉತ್ತರಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗೂ ತಗುಲಿತ್ತು.
ವಾಯು ಭಾರ ಕುಸಿತದಿಂದಾಗಿ ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವಿಲ್ಲದೆ ಮಳೆ ಸುರಿದಿತ್ತು.
ಆದರೂ ನಿಸರ್ಗ ಸೈಕ್ಲೋನ್ ನಿಂದ ಕರ್ನಾಟಕ ಸೇಫ್ ಆಗಿರುವುದು ರಾಜ್ಯದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.