ರಾಜ್ಯ

ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪವನಕುಮಾರ್ ಮಲಪಾಟಿ ಅಧಿಕಾರ ಸ್ವೀಕಾರ

ಬಳ್ಳಾರಿ prajakiran.com : ಗಣಿನಾಡು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಪವನಕುಮಾರ ಮಲಪಾಟಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ಕೇಂದ್ರ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ನಿಯೋಜಿತರಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ‌ಎಸ್.ಎಸ್.ನಕುಲ್ ನೂತನ ಜಿಲ್ಲಾಧಿಕಾರಿ ಪವನಕುಮಾರ ಮಲಪಾಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಪವನಕುಮಾರ ಮಲಪಾಟಿ 2012ನೇ‌ ಬ್ಯಾಚ್ ನ ಐಎಎಸ್‌ ಅಧಿಕಾರಿಗಳಾಗಿದ್ದು, ಇದುವರೆಗೆ ವಾಣಿಜ್ಯ ತೆರಿಗೆಗಳ(ಜಾರಿ)ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಈ ಹಿಂದೆ ಸಹಾಯಕ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು.

ಹೀಗಾಗಿ ನೂತನ ಜಿಲ್ಲಾಧಿಕಾರಿಗೆ ಬಳ್ಳಾರಿ ಜಿಲ್ಲೆಯ ಪರಿಚಯವಿದೆ.

ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಬರುತ್ತಾರೆ ಎಂದು ಜಿಲ್ಲೆಯ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಸಮೇತ ಹರಿದಾಡಿತ್ತು.

ಜಿಲ್ಲೆಯ ಜನರೂ ಕೂಡ ರೋಹಿಣಿ ಸಿಂಧೂರಿ ಅವರೇ ಬಳ್ಳಾರಿಗೆ ಡಿಸಿ ಆಗಿ ಬರುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರು. ಸಾಕಷ್ಟು ಜನ್ರು ವೆಲ್ ಕಮ್ ಕೂಡ ಮಾಡಿದ್ದರು.

ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಮಲಪಾಟಿ ಅವರಿಗೆ ನೂತನ ಡಿಸಿಯನ್ನಾಗಿ ಮಲಪಾಟಿ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿರ್ಗಮಿತ ಜಿಲ್ಲಾಧಿಕಾರಿ ನಕುಲ್ ಸಹ ತಮ್ಮ ಅಧಿಕಾರ ಹಸ್ತಾಂತರಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *