ಧಾರವಾಡ prajakiran.com : ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಕೊಚ್ಚಿಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ ಅವರ ಕುಟುಂಬಗಳಿಗೆ ಬುಧವಾರ ತಲಾ 5 ಲಕ್ಷ ರೂ.ಪರಿಹಾರ ನೀಡಲಾಯಿತು.
ನವಲಗುಂದ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಇವರಿಗೆ ತಲಾ 5 ಲಕ್ಷ ರೂ ಗಳ ಪರಿಹಾರ ಧನದ ಚೆಕ್ ನೀಡಿ, ಬೆಣ್ಣೆಹಳ್ಳ ವೀಕ್ಷಿಸಿದರು.
ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಅವರು ನಿನ್ನೇಯಷ್ಟೇ ಇಬ್ಬರು ರೈತರ ಮನೆಗೆ ತೆರಳಿ ತಕ್ಷಣ ಜಿಲ್ಲಾಡಳಿತ ನೆರವಿಗೆ ಧಾವಿಸುವಂತೆ ಒತ್ತಾಯಿಸಿದ್ದರ ಬಗ್ಗೆ ಪ್ರಜಾಕಿರಣ.ಕಾಮ್ ವರದಿ ಪ್ರಕಟಿಸಿತ್ತು.
ಈ ಹಿನ್ನಲೆಯಲ್ಲಿ ಕೊನೆಗೂ ಎಚ್ಚೆತ್ತ ಧಾರವಾಡ ಜಿಲ್ಲಾಡಳಿತಅವರಿಬ್ಬರ ಕುಟುಂಬಳಿಗೆ ಭೇಟಿ ನೀಡಿ ಇಂದು ಚೆಕ್ ಹಸ್ತಾಂತರಿಸಿ ಮಾನವೀಯತೆ ಮರೆದಿದೆ.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ,ಅಣ್ಣಿಗೇರಿ ತಹಶಿಲ್ದಾರ ಕೊಟ್ರೇಶ, ನವಲಗುಂದ ತಹಶಿಲ್ದಾರ ನವೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.