ಪಾಟ್ನಾ prajakiran. com : ಇಲ್ಲಿನ ಜವಾಹರ್ ಲಾಲ್ ನೆಹರು ಮಾರ್ಗದಲ್ಲಿರುವ ಪಾಟ್ನಾದ ವಿಶ್ವೇಶ್ವರಯ್ಯ ಭವನದಲ್ಲಿ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಸರ್ಕಾರಿ ಇಲಾಖೆಗಳಿಗೆ ಸೇರಿದ ಅಧಿಕೃತ ದಾಖಲೆಗಳು ಮತ್ತುಉಪಕರಣಗಳು ಹಾನಿಗೊಳಗಾಗಿವೆ ಎನ್ನಲಾಗುತ್ತಿದೆ.
ವಿಶ್ವೇಶ್ವರಯ್ಯ ಭವನದ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಳಗ್ಗೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಈ ಘಟನೆಯಲ್ಲಿ ಹಲವು ಸರ್ಕಾರಿ ಇಲಾಖೆಗಳಿಗೆ ಸೇರಿದ ಅಧಿಕೃತ ದಾಖಲೆಗಳು ಮತ್ತು ಉಪಕರಣಗಳಿಗೆ ಭಾರಿ ಹಾನಿಯಾಗಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಬೆಂಕಿ ನಂದಿಸಲು ಸ್ಥಳಕ್ಕೆ ಅನೇಕ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಸತತ ಕಾರ್ಯಾಚರಣೆ ನಡೆಸಿದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಇದೇ ವೇಳೆ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಲ್ಲಿದ್ದ ಅಧಿಕಾರಿಗಳನ್ನು ರಕ್ಷಿಸಿದ್ದಾರೆ ಎನ್ನಲಾಗುತ್ತಿದೆ.