ಧಾರವಾಡ prajakiran.com : ಹೆಲ್ಮೆಟ್ ಹಾಕಿಕೊಳ್ಳದೇ ಬೈಕ್ ಸವಾರನ ನಿಯಂತ್ರಣ ತಪ್ಪಿ ಬಿದ್ದು ಬೈಕ್ ಸವಾರನ ತಲೆಗೆ ಪೆಟ್ಟಾದ ಘಟನೆ ಹುಬ್ಬಳ್ಳಿ ಧಾರವಾಡ ರಸ್ತೆಯ ನವಲೂರು ರೈಲ್ವೆ ನಿಲ್ದಾಣ ಕ್ರಾಸ್ ಬಳಿ ನಡೆದಿದೆ.
ಘಟನೆಯಿಂದ ಬೈಕ್ ಸವಾರನ ತಲೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ಕೂಡಲೇ ಆತನನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.
ವೇಗವಾಗಿ ಬಂದದ್ದು ಹಾಗೂ ಬೈಕ್ ಸವಾರ ಹೆಲ್ಮೆಟ್ ಹಾಕಿಕೊಳ್ಳದೇ ಇರುವುದು ವ್ಯಕ್ತಿ ಗಂಭೀರ ಗಾಯಗೋಳಲು ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಪೊಲೀಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.