ಧಾರವಾಡ ಪ್ರಜಾಕಿರಣ. ಕಾಮ್ : ಧಾರವಾಡದ ಕೆಲಗೇರಿ ಸೇತುವೆ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ
ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ.
ಆತನನ್ನು ಧಾರವಾಡದ ಟಾಟಾ ಮಾರ್ಕೋಪೋಲೊ ಕಂಪನಿಯ ಕಾರ್ಮಿಕ ಕೆಲಗೇರಿ ಗ್ರಾಮದಿಂದ ಬರುತ್ತಿದ್ದ ದೇವೇಂದ್ರ ಸಿದ್ದಪ್ಪ ಕುರಕುಂದ ಎಂಬಾತ ಸಾವಿಗೀಡಾಗಿದ್ದಾನೆ ಎಂದು ಗುರುತಿಸಲಾಗಿದೆ.
ಕೆಲವರು ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೀಗಾಗಿದೆ ಎಂದರೇ, ಇನ್ನೂ ಕೆಲವರು ಬೈಕ್ ಸ್ಕಿಡ್ ಆಗಿ ಸಾವಿಗೀಡಾದ ದುರ್ಘಟನೆ ನಡೆದಿದೆ ಎಂದು ಹೇಳುತ್ತಿದ್ದಾರೆ.
ಮಾಹಿತಿ ಪಡೆಯುತ್ತಲೇ ಘಟನಾ
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮವನ್ನು ಜರುಗಿಸಿದ್ದಾರೆ.