ಧಾರವಾಡ prajakiran.com : ವೇಗವಾಗಿ ಚಲಿಸುತ್ತಿದ್ದ ಬೈಕ್ ವೊಂದು ನಿಯಂತ್ರಣ ತಪ್ಪಿದ ಪರಿಣಾಮ ಏಕಾಏಕಿ ಸ್ಕಿಡ್ ಆಗಿ ಸಿಗ್ನಲ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಧಾರವಾಡ ಡೆಂಟಲ್ ಆಸ್ಪತ್ರೆ ಬಳಿ ನಡೆದಿದೆ.
ಬೈಕ್ ಸ್ಕಿಡ್ ಆಗಿದ್ದರಿಂದ ಸವಾರ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಆತನನ್ನು ಧಾರವಾಡದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಯಿತು.
ಆದರೂ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತನನ್ಬು ಧಾರವಾಡದ ಸತ್ತೂರು ಗ್ರಾಮದ ಶ್ರೀನಿವಾಸ ಬಸಪ್ಪ ಹಡಪದ ಎಂದು ಗುರುತಿಸಲಾಗಿದೆ. ಆತ ಆಕ್ಸಿಜನ್ ಸೆಂಟರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಾಗಿದೆ.
ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.