ಧಾರವಾಡ ಪ್ರಜಾಕಿರಣ.ಕಾಮ್ : ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ಮಧ್ಯ ರಾತ್ರಿ ಹುಬ್ಬಳ್ಳಿ ರಸ್ತೆಯಲ್ಲಿ ನವಲೂರ ಗ್ರಾಮದ ಬಳಿ ಸಂಭವಿಸಿದೆ.
ಕಾರ್ತಿಕ ವಿರೂಪಾಕ್ಷ ಹಲಕರ್ಣಿಮಠ (20) ಮೃತಪಟ್ಟ ಯುವಕ.
ಸಂದೇಶ ಸುಭಾಸ ಹೊಸಮನಿ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದು, ಆತನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿ ಕಡೆಯಿಂದ ಧಾರವಾಡದತ್ತ ಬರುತ್ತಿದ್ದಾಗ ಮಧ್ಯರಾತ್ರಿ1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಮೃತ ಯುವಕ ಕಾರ್ತಿಕ ಪತ್ರಕರ್ತ ವಿರೂಪಾಕ್ಷ ಹಲಕರ್ಣಿಮಠ ಅವರ ಪುತ್ರ. ಸದ್ಯ ಆತನು ಬಿಬಿಎ ಪ್ರಥಮ ವರ್ಷದಲ್ಲಿ ಕಲಿಯುತ್ತಿದ್ದನು.
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.