ಅಪರಾಧ

ಧಾರವಾಡದಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ‌ ಯುವಕ ಸಾವು…!

ಧಾರವಾಡ ಪ್ರಜಾಕಿರಣ.ಕಾಮ್ : ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ಮಧ್ಯ ರಾತ್ರಿ ಹುಬ್ಬಳ್ಳಿ ‌ರಸ್ತೆಯಲ್ಲಿ ನವಲೂರ ಗ್ರಾಮದ‌ ಬಳಿ ಸಂಭವಿಸಿದೆ.

ಕಾರ್ತಿಕ ವಿರೂಪಾಕ್ಷ ಹಲಕರ್ಣಿಮಠ (20) ಮೃತಪಟ್ಟ ಯುವಕ.

ಸಂದೇಶ ಸುಭಾಸ ಹೊಸಮನಿ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದು,‌ ಆತನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಬ್ಬಳ್ಳಿ ಕಡೆಯಿಂದ ಧಾರವಾಡದತ್ತ‌ ಬರುತ್ತಿದ್ದಾಗ ಮಧ್ಯರಾತ್ರಿ1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಮೃತ ಯುವಕ ಕಾರ್ತಿಕ ಪತ್ರಕರ್ತ ವಿರೂಪಾಕ್ಷ ಹಲಕರ್ಣಿಮಠ ಅವರ ಪುತ್ರ. ಸದ್ಯ ಆತನು ಬಿಬಿಎ ಪ್ರಥಮ ವರ್ಷದಲ್ಲಿ ಕಲಿಯುತ್ತಿದ್ದನು.

ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *