ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಇಸ್ರೋ ವಿಜ್ಞಾನಿಗಳ ಅಗ್ರಗಣ್ಯ ಸಾಧನೆ ಚಂದ್ರಯಾನ3 ರ ಯಶಸ್ಸಿನ ಸಂಭ್ರಮಾಚರಣೆಯ ಅಂಗವಾಗಿ ಇಂದು ಹುಬ್ಬಳ್ಳಿಯ ಚೇತನಾ ಬ್ಯುಸಿನೆಸ್ ಸ್ಕೂಲ್ ನಿಂದ ಸಾಯಿ ನಗರ ವೃತ್ತದವರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಸ್ಥಳೀಯರು ಹಾಗೂ ಯುವಕರೆಲ್ಲ ಒಗ್ಗೂಡಿ ಬೃಹತ್ ಬೈಕ್ ರ್ಯಾಲಿ ನಡೆಸಿದರು.
ಈ ಬೃಹತ್ ಬೈಕ್ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, “ಇಸ್ರೋ ವಿಜ್ಞಾನಿಗಳ ಅವಿರತ ಶ್ರಮದ ಫಲವಾಗಿ ಇಂದು ಜಗತ್ತೇ ಭಾರತವನ್ನು ಪ್ರಶಂಸಿಸುತ್ತಿದೆ.
ಇಂತಹ ಸಂದರ್ಭದಲ್ಲಿ ನಾವು ಭಾರತೀಯರು ನಮ್ಮವರ ಸಾಧನೆಯನ್ನು ಸಂಭ್ರಮಿಸುವುದು ಕೂಡ ನಮ್ಮ ಸೌಭಾಗ್ಯ. ಯುವಕರೆಲ್ಲರು ಸೇರಿ ಸ್ವಯಂ ಪ್ರೇರಿತರಾಗಿ ಸಂಭ್ರಮಾಚರಣೆಯನ್ನು ಮಾಡುತ್ತಿರುವುದು ಕೂಡ ಪ್ರಶಂಸನೀಯ ಅಂತ ಹೇಳಿದ್ರು.
ಕಾರ್ಯಕ್ರಮದಲ್ಲಿ ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ವೀಣಾ ಬಾರದ್ವಾಡ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್, ಪಾಲಿಕೆ ಸದಸ್ಯರಾದ ಸಂತೋಷ ಚೌಹಾನ್, ತಿಪ್ಪಣ್ಣ ಮಜ್ಜಗಿ ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.