ಧಾರವಾಡ ಜಿಲ್ಲೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಸ್ಪರ್ಧೆಗಳು ನಡೆಯಲಿ : ಸಚಿವ ಸಂತೋಷ ಲಾಡ್
ಧಾರವಾಡ ಪ್ರಜಾಕಿರಣ.ಕಾಮ್ ಆ.27: ಜಿಲ್ಲೆಯಲ್ಲಿ ಇಂದು ಬೈಕ್ ರೈಸಿಂಗ್ ಸ್ಪರ್ಧೆ ನಡೆಯುತ್ತಿರುವುದು ಖುಷಿಯ ಸಂಗತಿ.
ಮುಂದಿನ ದಿನಗಳಲ್ಲಿ ಇನ್ನೂ ವಿವಿಧ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗಳು ನಡೆಯಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಇಂದು ಬೆಳಿಗ್ಗೆ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಮೈದಾನದಲ್ಲಿ ಎಂ.ಆರ್.ಎಫ್ ಡರ್ಟ್ ಟ್ರ್ಯಾಕ್ ಎಫ್.ಎಂ.ಎಸ್.ಸಿ.ಐ ಚಾಂಪಿಯನ್ ಶಿಪ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಬೈಕ್ ರೈಸಿಂಗ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲು ಎಲ್ಲರ ಸಹಕಾರ ಬಹಳ ಮುಖ್ಯ. ಇಂದು ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಸ್ಪರ್ಧಿಗಳಿಗೂ ಅಭಿನಂದನೆಗಳು ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.