ಧಾರವಾಡ ಪ್ರಜಾಕಿರಣ. ಕಾಮ್ : ನಗರದ ಬೀರೇಶ್ವರ ಕೋ ಆಪ್ರೇಟಿವ್ ಸೊಸೈಟಿಯ ಕೀಲಿ ಮುರಿದು ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿರುವ ಪ್ರಕರಣ ಸೋಮವಾರ ಬೆಳಕಿಗೆ ಬಂದಿದೆ.
ನಗರದ ಕೋರ್ಟ್ ಸರ್ಕಲ್ ಬಳಿಯಿರುವ ಶ್ರೀ ಬೀರೇಶ್ವರ ಕೋ ಆಪ್ ಕ್ರೇಡಿಟ್ ಸೊಸೈಟಿ ಲಿ. ಯಕ್ಸಂಬಾದ ಧಾರವಾಡ ಶಾಖೆಯಲ್ಲಿ ಸಿಸಿಟಿವಿ ಕ್ಯಾಮರಾಗಳನ್ನ ಸುಟ್ಟು ಒಳನುಗ್ಗಿರುವ ಕಳ್ಳರು, 20 ಲಕ್ಷ ರೂಪಾಯಿ ನಗದು ಹಾಗೂ 35 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನ ದೋಚಿದ್ದಾರೆಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಧಾರವಾಡ ಶಹರ ಠಾಣೆಯ ಸಿಪಿಐ ಪ್ರಭು ಗಂಗನಹಳ್ಳಿ, ಬೆರಳಚ್ಚು ತಜ್ಞರು, ಶ್ವಾನದಳ ದೊಂದಿಗೆ ಭೇಟಿ ನೀಡಿ
ಪರಿಶೀಲನೆ ನಡೆಸಿದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.