ಅಪರಾಧ

ಧಾರವಾಡದಲ್ಲಿ ಕೋವಿಡ್ ನಿಯಮಾವಳಿ ಗಾಳಿಗೆ ತೂರಿ ಜನುಮ ದಿನ ಆಚರಿಸಿಕೊಂಡ ರೌಡಿಶೀಟರ್ ಸ್ಯಾಂಡಿ….!

ಧಾರವಾಡ : ಕೋವಿಡ್ ನಿಯಮಾವಳಿ ಗಾಳಿಗೆ ತೂರಿ ಧಾರವಾಡದ ಉಪನಗರ ಪೊಲೀಸ್ ಠಾಣೆಯ ರೌಡಿಶೀಟರ್ ಸ್ಯಾಂಡಿ ಅಲಿಯಾಸ್ ಸಂದೀಪ ಸವದತ್ತಿ ಜನುಮ ದಿನ ಆಚರಣೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ‌.

ಧಾರವಾಡದ ಸಪ್ತಾಪೂರ ಬಡಾವಣೆಯ ಮನೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹತ್ತು ಹಲವು ಜನರನ್ನು ಸೇರಿಕೊಂಡು
ಭರ್ಜರಿ ಸಂತಸ ಹಂಚಿಕೊಂಡ ಗ್ಯಾಂಗ್ ಸದಸ್ಯರು ಮಾಸ್ಕ್ , ಸಾಮಾಜಿಕ ಅಂತರವು ಮಾಯಾವಾಗಿರುವ ವೀಡಿಯೋ ವೈರಲ್ ಆಗಿದೆ.

ಧಾರವಾಡ ಜಿಲ್ಲಾಡಳಿತ ಜೂನ್ 7 ರವರೆಗೆ ಜಿಲ್ಲೆಯಲ್ಲಿ ಜನುಮ ದಿನ, ಮದುವೆ ಕಾರ್ಯಕ್ರಮ ರದ್ದುಗೊಳಿಸಿ ಆದೇಶ ಹೊರಡಿಸಿದರೂ
ಕ್ಯಾರೆ ಎನ್ನದ ರೌಡಿ ಗ್ಯಾಂಗ್ ನಡೆ ಅಚ್ಚರಿ ಮೂಡಿಸಿದೆ‌.

ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆತನನ್ನು ಠಾಣೆಗೆ ಕರೆಯಿಸಿ ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ಯಾಮರಾವ ಸಜ್ಜನ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.

ರೌಡಿಶೀಟರ್ ಸ್ಯಾಂಡಿ ಅಲಿಯಾಸ್ ಸಂದೀಪ ಸವದತ್ತಿ ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವುದು ಇಲ್ಲಿ ಸ್ಮರಿಸಬಹುದು.

ಈಗಲಾದರೂ ಹುಬ್ಬಳ್ಳಿ ಧಾರವಾಡ ಅವಳಿ ನಗರ ಪೊಲೀಸ್ ಆಯುಕ್ತ ಲಾಬುರಾಮ್ ಇದರ ವಿರುದ್ಧ ಯಾವ ಕಾನೂನು ಕ್ರಮ ಜರುಗಿಸಿ ಬಿಸಿ ತಾಕಿಸುತ್ತಾರೆಯೇ  ಎಂಬುದನ್ನು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *