ಧಾರವಾಡ prajakiran. com : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಧಾರವಾಡದ ಮುರುಘಾಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡದ ಡಿಪೋ ಸರ್ಕಲ್ ನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಧಾರವಾಡದ ಮುರುಘಾಮಠಕ್ಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ ಆಗಮಿಸಿದಾಗ ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಮತ್ತು ಎಂ.ಬಿ. ಪಾಟೀಲ್ ವಿರುದ್ಧ ಘೋಷಣೆ ಕೂಗಿ, ಕಪ್ಪು ಬಟ್ಟೆಯನ್ನು ತೋರಿಸಿ ವಿರೋಧ ವ್ಯಕ್ತ ಪಡಿಸಿದರು.
ತಕ್ಷಣವೇ ಪೊಲೀಸರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಯುವಮೋರ್ಚಾ ಅಧ್ಯಕ್ಷ ಶಕ್ತಿ ಹಿರೇಮಠ, ಪವನ್ ತೀಟೆ, ಮಂಡಳ ಅಧ್ಯಕ್ಷ ಸುನೀಲ ಮೋರೆ, ಮಾಜಿ ಶಾಸಕಿ ಸೀಮಾ ಮಸೂತಿ, ಶ್ರೀನಿವಾಸ್ ಕೋಟ್ಯಾನ್, ವಿನಾಯಕ ಗೊಂದಳಿ, ನಿತಿನ್ ಇಂಡಿ, ರಾಕೇಶ್ ನಾಜರೆ, ಶಂಕರ ಶೇಳಕೆ, ಮುತ್ತು ಬನ್ನೂರು, ಗುರುಶಾಂತ್ ಹಿರೇಮಠ, ಸುರಂಜನ್ ಗುಂಡ, ರಾಜೇಶ್ ನಾಯ್ಕ್, ಪ್ರಮೋದ ಬಾಗಿಲದ, ಶಿವು ಜಾಕೋಜಿ, ಅಮಿತ ಪಾಟೀಲ್, ಮಂಜು ಕಮ್ಮಾರ, ವೀರೇಶ ಹಿರೇಮಠ, ಮಂಜುನಾಥ್ ಹಿರೇಮಠ ಸೇರಿದಂತೆ ಪಾಲ್ಗೊಂಡಿದ್ದರು.
ವೀರ ಸಾವರ್ಕರ್ ಭಾವಚಿತ್ರದ ಬೃಹತ್ ಬ್ಯಾನರ್ ಅನ್ನು ಪೊಲೀಸರು ತೆರವು ಮಾಡಿದರು.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಮುಖಂಡರು ಪೊಲಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು
ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಮೊಳಗಿಸಲು ಮುಂದಾದರು.
ಇದರಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮಾಹಿತಿ ಅರಿತು ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ಪರಿಸ್ಥಿತಿ ನಿಯಂತ್ರಣ ಸಾಧಿಸಲು ಮುಂದಾದರು.
ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ವೇಳೆ ಸಾವರ್ಕರ್ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದಕ್ಕೆ ಪ್ರತಿಯಾಗಿ ಧಾರವಾಡಕ್ಕೆ ಆಗಮಿಸುತ್ತಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲಗೆ ಬಿಸಿ ತಾಗಿಸಲು ಬಿಜೆಪಿ ಮುಂದಾಗಿತ್ತು.