ರಾಜ್ಯ

ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂಬರ 1ರ ಬಿಜೆಪಿ ಬಂಡಾಯ ಅಭ್ಯರ್ಥಿ ಕಾಂಗ್ರೆಸ್ ಸೇರ್ಪಡೆ…..!

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಅದರಲ್ಲೂ ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಬಂಡಾಯ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಬಿಜೆಪಿ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆದಿದ್ದಾರೆ.

ಅದರಲ್ಲೂ ವಿಶೇಷವಾಗಿ ಗ್ರಾಮೀಣ ಶಾಸಕರು ವಾಸವಿರುವ ವಾರ್ಡ್ ನಲ್ಲಿಯೇ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ
ಸರಸ್ವತಿ ಬೆಂಗೇರಿ ಅವರನ್ನು ಬಿಜೆಪಿ ಉಪಾಧ್ಯಕ್ಷ ಶಂಕರ ಬಸವರೆಡ್ಡಿ ಅವರು ತಮ್ಮ ಬಡಾವಣೆಯ ಫೆಡರೇಶನ್ ಬೆಂಬಲಿತ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸುವಂತೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಆದರೆ, ಬದಲಾದ ಪರಿಸ್ಥಿತಿಯಲ್ಲಿ ಅವರು  ನಿನ್ನೇಯಷ್ಟೆ ಕಣದಿಂದ ಹಿಂದಕ್ಕೆ ಸರಿಯುವಂತೆ ಮಾಡುವಲ್ಲಿ ಕೆಲವರು ಸಫಲರಾಗಿದ್ದರು.

ಆದರೆ ಇಂದು ಬಿಜೆಪಿ ವಿರುದ್ದ ಬಂಡಾಯ ಎದ್ದು ಇಂದು ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ತಿರುಗೇಟು ನೀಡಿದ್ದಾರೆ.

ಈ ಸಂದರ್ಭದಲ್ಲಿ ವಾರ್ಡ್ ನ ಮಹಾನಗರ ಪಾಲಿಕೆ ಮಾಜಿ ಸದಸ್ಯರು ಆಗಿರುವ ಕಾಂಗ್ರೆಸ್ ಮುಖಂಡ ಸುರೇಶ ಯಾಲಿಗಾರ್ ಹಾಗೂ ಶಿವಾನಂದ್ ಮೆಣಸಿನಕಾಯಿ ಉಪಸ್ಥಿತರಿದ್ದರು.

ಇದರಿಂದ ಬಿಜೆಪಿ ಗೆ ತೀವ್ರ ಹಿನ್ನಡೆಯಾಗುವ ಸಾಧ್ಯತೆಗಳು ಎದ್ದು ಕಾಣುತ್ತಿದ್ದು,. ತುಂಬಾ ಜನ ಬಿಜೆಪಿ ವಿರುದ್ದ ಒಳಗಿನಿಂದ ಬಂಡಾಯ ಸಾರಿರುವುದು ಗುಟ್ಟಾಗಿ ಉಳಿದಿಲ್ಲ.

ಇದು ಬಿಜೆಪಿ ಅಭ್ಯರ್ಥಿಗೆ ಬಿಸಿತುಪ್ಪವಾಗಲಿದೆಯೇ ಎಂಬುದು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *