ರಾಜ್ಯ

ಬಿಜೆಪಿ ಜೆಡಿಎಸ್ ಮೈತ್ರಿ ಗೇಮ್ ಚೈಂಜರ್ 

ಬೆಂಗಳೂರು ಪ್ರಜಾಕಿರಣ.ಕಾಮ್ : ಜೆಡಿಎಸ್ ಪಕ್ಷ ಎನ್ ಡಿಎ ಭಾಗವಾಗುವುದರಿಂದ ರಾಜ್ಯದಲ್ಲಿ ರಾಜಕೀಯವಾಗಿ ಗೇಮ್ ಚೈಂಜರ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ‌‌.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ‌.

ಎರಡೂ ಪಕ್ಷಗಳು ಒಟ್ಟಿಗೆ ಹೋಗಬೇಕೆನ್ನುವ ವಿಚಾರದಲ್ಲಿ ಎರಡು ಪಕ್ಷಗಳ ನಡುವೆ ಮಾತುಕತೆಯಾಗಿದೆ. ವರಿಷ್ಠರು ತೆಗೆದುಕೊಂಡ ತೀರ್ಮಾನ ಸ್ವಾಗತಾರ್ಹ ಎಂದು ಹೇಳಿದರು.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅನಿಷ್ಠ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರ ವಿರುದ್ದ ಎರಡೂ ಪಕ್ಷಗಳು ಒಟ್ಟಾಗಿ ಹೋರಾಟ ಮಾಡಬೇಕು ಎನ್ನುವುದು ಜನರ ಬಯಕೆಯಾಗಿತ್ತು.

ಮುಂದಿನ ದಿನಗಳಲ್ಲಿ ಎರಡು ಪಕ್ಷಗಳು ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು.

ಮೈತ್ರಿ ಕುರಿತು ಎರಡೂ ಪಕ್ಷಗಳ ಕೆಲವರಲ್ಲಿ ಅಸಮಾಧಾನ ಇದೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸಂದರ್ಭದಲ್ಲಿ ಹೈಕಮಾಂಡ್ ನಾಯಕರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ.

ಇದು ಗೇಮ್ ಚೇಂಜರ್ ಆಗುತ್ತದೆ. ಸೀಟು ಹಂಚಿಕೆ ಮುಂದಿನ ದಿನಗಳಲ್ಲಿ ಆಗಲಿದೆ ಎಂದು ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *