ಜಿಲ್ಲೆ

ಧಾರವಾಡದ ಹಿರಿಯ ಬಿಜೆಪಿ ಮುಖಂಡ ಪ್ರಕಾಶ ಗೋಡಬೋಲೆ ಕರೋನಾಗೆ ಬಲಿ…!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಪ್ರಕಾಶ ಗೋಡಬೋಲೆ ಕರೋನಾಗೆ ಬಲಿಯಾಗಿದ್ದಾರೆ.

ಅವರು ಕಳೆದ ಹಲವು ದಿನಗಳಿಂದ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಸೋಮವಾರ ಬೆಳಗಿನ ಜಾವ ಚಿಕಿತ್ಸೆ ಫಲಿಸದೆ ವಿಧಿವಶರಾದರು.

ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯರಾಗಿದ್ದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಎನ್ನದೆ ಪಕ್ಷ ಭೇದ ಮರೆತು ಅನೇಕರಿಗೆ ಕಷ್ಟದ ಸಮಯದಲ್ಲಿ ಸಹಾಯಹಸ್ತ ಚಾಚಿದ್ದರು.

ಅವರ ಸರಳ,ಸಜ್ಜನಿಕೆಗೆ ಎಲ್ಲರೂ ಮನಸೋತಿದ್ದರು. ಅವರ ಅಗಲಿಕೆಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರ ಆತ್ಮೀಯ ಗೆಳೆಯಾ, ಎಐಸಿಸಿ ಸದಸ್ಯ ಹಾಗೂ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಸೇರಿದಂತೆ ಹಲವಾರು ಗಣ್ವರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *