ಕೊಡಗು prajakiran.com : ರಾಜ್ಯದ ಬಿಜೆಪಿ ಸರಕಾರ ಕೋವಿಡ್ ಹೆಸರಿನಲ್ಲಿ ಮಾಡಿದ ಎನ್ನಲಾದ ಅವ್ಯವಹಾರದ ತನಿಖೆಗೆ ಸ್ವಪಕ್ಷಿಯ ಶಾಸಕರಿಂದಲೇ ಒತ್ತಾಯ ಕೇಳಿಬಂದಿದೆ.
ಹೌದು ಇದು ಬಿಜೆಪಿಗೆ ಇನ್ನಷ್ಟು ಸಂಕಷ್ಟಕ್ಕೆ ಹಾಗೂ ಮುಜುಗರಕ್ಕೆ ಸಿಲುಕಿಸುವ ಹೇಳಿಕೆಯಾಗಿದೆ ಎಂದರೆ ತಪ್ಪಾಗಲಾರದು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಶುಕ್ರವಾರ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಮಾತು ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋವಿಡ್ ಹೆಸರಿನಲ್ಲಿ ಈವರೆಗೆ 4 ಸಾವಿರ ಕೋಟಿ ಖರ್ಚು ಮಾಡಿದೆ ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಕೇವಲ 600 ಕೋಟಿ ಖರ್ಚು ಮಾಡಿದೆ ಎಂದು ಹೇಳಿದೆ. ಹೀಗಾಗಿ ರಾಜ್ಯದ ಜನತೆ ಎದುರು ಯಾವುದು ಸತ್ಯ ಯಾವುದು ಸುಳ್ಳು ಎಂಬುದು ಬಯಲಾಗಲಿ ಎಂದು ಹೇಳಿದ್ದಾರೆ.
ನ್ಯಾಯಾಂಗ ತನಿಖೆ ಮಾಡಲಿ ಜೊತೆಗೆ ಇಂತಹ ಸಂದರ್ಭದಲ್ಲಿ ಹಣ ದುರುಪಯೋಗ ಮಾಡಿದರೆ ಅವರಿಗೆ ನೇಣು ಹಾಕುವ ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿ ಬಿಜೆಪಿ ಶಾಸಕಅಪ್ಪಚ್ಚು ರಂಜನ್ ಅಚ್ಚರಿ ಮೂಡಿಸಿದ್ದಾರೆ.