ರಾಜ್ಯ

ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ನಮ್ಮೆಲ್ಲರಿಗೂ ಪಕ್ಷದ ಬೆಳವಣಿಗೆ ಮುಖ್ಯ. ಎಲ್ಲರೂ ಭಿನ್ನಮತ ಮರೆತು ಪಕ್ಷಕ್ಕಾಗಿ ಶ್ರಮಿಸಬೇಕು. ಎಲ್ಲ ಕಡೆಯೂ ನಮಗೆ ಒಂದೊದು ಗುರಿ ಇದೆ, ಅದನ್ನು ತಲುಪಲು ಶ್ರಮಿಸಿಬೇಕು. ಜೊತೆಗೆ ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಚ್ಚಿನ ನಾಯಕ ಅಮಿತ್ ಶಾ ಇಂದು ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಅಧಿಕೃತ ಕಾರ್ಯಕ್ರಮಗಳಾದ ಎಫ್‌ಎಸ್ಎಲ್‌ಯು ಲ್ಯಾಬ್ ಅಡಿಗಲ್ಲು, ಬಿವಿಬಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕುಂದಗೋಳದಲ್ಲಿ ಬೂತಮಟ್ಟದ ವಿಜಯಸಂಕಲ್ಪ ಸಮಾವೇಶ ನಡೆಯಲಿದೆ ಎಂದರು.

ಕಿತ್ತೂರು ಕರ್ನಾಟಕ ನಮ್ಮ ಭದ್ರಕೋಟೆ, ಈ ಕಾರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ: ಇನ್ನು ಎಂಕೆ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಬಳಿಕ ಬೆಳಗಾವಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಲಿದೆ.

ಕಿತ್ತೂರು ಕರ್ನಾಟಕ ನಮ್ಮ ಭದ್ರಕೋಟೆ, ಈ ಕಾರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಮಗ್ರ ಕರ್ನಾಟಕದಲ್ಲಿ ಅಮಿತ್ ಶಾ ಕಳೆದ ಚುನಾವಣೆಯಲ್ಲಿ ಓಡಾಡಿದ್ದರು. ಮೊನ್ನೆ ಕೂಡ ಮಂಡ್ಯದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಶಾ ಚಾಲನೆ ನೀಡುತ್ತಿದ್ದಾರೆ. ಜನಪ್ರಿಯತೆ ಅವರಿಗಿದ್ದು, ಈ ಸಲವೂ ರಾಜ್ಯಾದ್ಯಂತ ಓಡಾಡಲಿದ್ದಾರೆ ಎಂದು ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *