ಕೋಲ್ಕತ್ತಾ Prajakiran.com : ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭೆ ಚುನಾವಣೆಯ ಫಲಿತಾಂಶದ ದಿನದಿಂದ ಆರಂಭವಾದ ಹಿಂಸಾಚಾರ ಮಂಗಳವಾರವೂ ಮುಂದುವರಿ ದಿದ್ದು, ಮೃತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಹಿಂಸಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಂದು ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮಮತಾ ಬ್ಯಾನರ್ಜಿ, ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ನಡೆಯುತ್ತಿರುವ ಗಲಭೆ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಖಡಕ್ ಆಗಿ ಸೂಚಿಸಿದ್ದಾರೆ.
ಸಭೆಯ ಬಳಿಕ ಮಾಧ್ಯಮಗಳ ಎದುರು ಮಾತನಾಡಿರುವ ಅವರು, ಇಂತಹ ಘಟನೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.
ಬಿಜೆಪಿ ಗೆಲುವು ಪಡೆದ ಕ್ಷೇತ್ರಗಳಲ್ಲಿ ಹೆಚ್ಚು ಗಲಾಟೆಗಳು ನಡೆಯುತ್ತಿವೆ.
ಹಳೆ ವಿಡಿಯೋಗಳ ಮೂಲಕ ಸುಳ್ಳು ಸುದ್ದಿಗಳನ್ನು ಬಿಜೆಪಿ ಪಕ್ಷ ಹರಡುತ್ತಿದೆ.
ಇಂತಹ ಕೃತ್ಯವನ್ನು ನಿಲ್ಲಿಸುವಂತೆ ಎಲ್ಲ ರಾಜಕೀಯ ಪಕ್ಷಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.