ಆಧ್ಯಾತ್ಮ

ಹಿರಿಯ ಸಾಹಿತಿ ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ…..!

ಬೆಂಗಳೂರು prajakiran.com : ಹಿರಿಯ ಸಾಹಿತಿ ಕೆ ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ.

ವಕೀಲೆ ಮೀರಾ ರಾಘವೇಂದ್ರ ಅವರಿಂದ ಭಗವಾನ್ ಮುಖಕ್ಕೆ ಮಸಿ ಬಳಿಯಲಾಗಿದೆ.

ಭಗವಾನ್ ಅವರು ಹಿಂದೂ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಆಕ್ರೋಶ ಭರಿತವಾಗಿ ತೀವ್ರ ಸ್ವರೂಪದ ಅಸಮಾಧಾನ ವ್ಯಕ್ತಪಡಿಸಿದರು.

ಭಗವಾನ್ ವಕೀಲೆ ಖಾಸಗಿ ದೂರು ದಾಖಲಿಸಿದ್ದರು. ಹೀಗಾಗಿ ಗುರುವಾರ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಭಗವಾನ್ ಹಾಜರಾಗಿದ್ದರು.

ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ ಬರುವ ವೇಳೆ ವಕೀಲೆ ಏಕಾಏಕಿ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.

ನ್ಯಾಯಾಲಯದ ಆವರಣದಲ್ಲೇ ಮುಖಕ್ಕೆ ಮಸಿ ಬಳೆದ ವಕೀಲೆ ಇಷ್ಟು ವಯಸ್ಸಾಗಿದೆ. ಹಿಂದೂ ಧರ್ಮದ ದೇವರ ಅವಹೇಳನ ಮಾಡ್ತಿರಾ ಎಂದು ಪ್ರಶ್ನಿಸಿದರು.

ಭಗವಾನ್ ಗೆ ನ್ಯಾಯಾಲಯ ಜಾಮೀನು ನೀಡಿತ್ತು.

ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿದ ಹಿನ್ನೆಲೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಕೆ ಎಸ್ ಭಗವಾನ್ ಅವರು
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ
ವಕೀಲೆ ಮೀರಾ ರಾಘವೇಂದ್ರ ವಿರುದ್ಧ ದೂರು ದಾಖಲಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *