ಬೆಂಗಳೂರು prajakiran.com : ಹಿರಿಯ ಸಾಹಿತಿ ಕೆ ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ.
ವಕೀಲೆ ಮೀರಾ ರಾಘವೇಂದ್ರ ಅವರಿಂದ ಭಗವಾನ್ ಮುಖಕ್ಕೆ ಮಸಿ ಬಳಿಯಲಾಗಿದೆ.
ಭಗವಾನ್ ಅವರು ಹಿಂದೂ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಆಕ್ರೋಶ ಭರಿತವಾಗಿ ತೀವ್ರ ಸ್ವರೂಪದ ಅಸಮಾಧಾನ ವ್ಯಕ್ತಪಡಿಸಿದರು.
ಭಗವಾನ್ ವಕೀಲೆ ಖಾಸಗಿ ದೂರು ದಾಖಲಿಸಿದ್ದರು. ಹೀಗಾಗಿ ಗುರುವಾರ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಭಗವಾನ್ ಹಾಜರಾಗಿದ್ದರು.
ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ ಬರುವ ವೇಳೆ ವಕೀಲೆ ಏಕಾಏಕಿ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.
ನ್ಯಾಯಾಲಯದ ಆವರಣದಲ್ಲೇ ಮುಖಕ್ಕೆ ಮಸಿ ಬಳೆದ ವಕೀಲೆ ಇಷ್ಟು ವಯಸ್ಸಾಗಿದೆ. ಹಿಂದೂ ಧರ್ಮದ ದೇವರ ಅವಹೇಳನ ಮಾಡ್ತಿರಾ ಎಂದು ಪ್ರಶ್ನಿಸಿದರು.
ಭಗವಾನ್ ಗೆ ನ್ಯಾಯಾಲಯ ಜಾಮೀನು ನೀಡಿತ್ತು.
ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿದ ಹಿನ್ನೆಲೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಕೆ ಎಸ್ ಭಗವಾನ್ ಅವರು
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ
ವಕೀಲೆ ಮೀರಾ ರಾಘವೇಂದ್ರ ವಿರುದ್ಧ ದೂರು ದಾಖಲಿಸಿದ್ದಾರೆ.