ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮತದಾನಕ್ಕೆ ಕೇವಲ ಒಂದು ದಿನ ಬಾಕಿವಿರುವ ಸಂದರ್ಭದಲ್ಲಿಯೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಸವರಾಜ ಮಲಕಾರಿ ರಾಜೀನಾಮೆ ನೀಡಿದ್ದಾರೆ.
ಕುರುಬ ಸಮಾಜದ ಪ್ರಬಲ ಹಾಗೂ ಯುವ ಮುಖಂಡರಾಗಿದ್ದ ಮಲಕಾರಿ 19 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದರು.
ಬಸವರಾಜ ಮಲಕಾರಿಯವರು ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ 3 ವರ್ಷಗಳ ಕಾಲ ಬೂತ್ ಮಟ್ಟದಿಂದ ಪಕಗಷ ಸಂಘಟಿಸಿದ್ದರು.
ಈ ಭಾಗದಲ್ಲಿ ತಮ್ಮದೇ ಆದ ಅಭಿಮಾನಿಗಳ ಹಾಗೂ ಕಾರ್ಯಕರ್ತರ ಪಡೆಯನ್ನು ಹೊಂದಿದ್ದ ಅವರಿಗೆ ಪ್ರಸಕ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಪಕ್ಷದ ಆಂತರಿಕ ಬೆಳವಣಿಗೆಯಿಂದ ಮನನೊಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಅತ್ಯಂತ ನೋವಿನಿಂದ ರಾಜೀನಾಮೆ ನೀಡಿದ್ದು, ಇದನ್ನು ಸ್ವೀಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನು ಪಕ್ಷ ಯಾವರೀತಿ ಸ್ವೀಕರಿಸುತ್ತದೆ ಎಂಬುದನ್ನು ಕಾದು ನೋಡಬೇಕು.
ಇದು ಪಕ್ಷದ ಮೇಲೆ ಹಾಗೂ ಅವಳಿನಗರದ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳನ್ನು ಕೂಡ ಅಲ್ಲಗಳೆಯುವಂತಿಲ್ಲ. ಈ ಬಗ್ಗೆ ಸೆ. 6ರಂದು ಸ್ಪಷ್ಟವಾದ ಚಿತ್ರಣ ಸಿಗಲಿದೆ