ರಾಜ್ಯ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ prajakiran.com : ರಕ್ತದಾನ ಮಾಡುವುದರಿಂದ ಅಮೂಲ್ಯ ಜೀವ ಉಳಿಸಿದಂತಾಗುತ್ತದೆ.

ಅಂತಹ ಕಾರ್ಯಕ್ಕೆ ಯುವಕರು ಮುಂದಾಗುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ವಿಧಾನ ಪರಿಷತ್ ನೂತನ ಸದಸ್ಯರೂ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚನ್ನರಾಜ ಹಟ್ಟಿಹೊಳಿ ಹೇಳಿದರು

ಸವದತ್ತಿಯ ಹರ್ಷ ಶುಗರ್ಸ್ ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಗುರುವಾರ ನಡೆದ ಶಿಬಿರವನ್ನು ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.

ಪ್ರತಿ ವರ್ಷ ಇಂತಹ ಶಿಬಿರ ಮಾಡುವ ಮೂಲಕ ಇಲ್ಲಿನ ಸಿಬ್ಬಂದಿ ಆದರ್ಶಮಯ ಕಾರ್ಯ ಮಾಡುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಕಾರ್ಖಾನೆಯ ಮೂಲಕ ಹಲವು ವಿದಾಯಕ ಯೋಜನೆಗಳನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹಟ್ಟಿಹೊಳಿ ಹೇಳಿದರು.

ಹರ್ಷ ಸಕ್ಕರೆ ಕಾರ್ಖಾನೆ, ಲಕ್ಷ್ಮಿ ತಾಯಿ ಸೌಹಾರ್ದ ಸಹಕಾರಿ ಹಾಗೂ ಕೆಎಲ್ಇಎಸ್ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಪ್ರಧಾನ ವ್ಯವಸ್ಥಾಪಕರಾದ ಸದಾಶಿವ ತೋರಾಟ್, ಎನ್.ಎಂ.ಪಾಟೀಲ್, ಸಿಎಒ ಯು.ಸಿ.ಚೌಕಿಮಠ, ಕಾರ್ಖಾನೆಯ ಎಲ್ಲ ಸಿಬ್ಬಂದಿ, ಡಿ.ಡಿ.ತೋಪಾಜಿ, ಮಹಾಂತೇಶ ಮತ್ತಿಕೊಪ್ಪ, ಸುರೇಶ್ ಬಡಗಿಗೌಡರ್, ವಿಷ್ಣು ಮೋಹಿತೆ, ಬಗವಾನ್ ಖಡೆ, ಬಂಡು ಬಿಟ್ಟಡೆ, ಶಿವಾನಂದ ಖಾನಾಪುರ್ ಹಾಗೂ ಕೆಎಲ್ಇ ಆಸ್ಪತ್ರೆ ಸಿಬ್ಬಂದಿ ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *