ಬೆಂಗಳೂರು prajakiran.com : ರಾಜ್ಯದ ನೂತನ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
ಹಂಗಾಮಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದರು. ಅದಕ್ಕೆ ಗೋವಿಂದ ಕಾರಜೋಳ ಅನುಮೋದನೆ ನೀಡಿದರು.
ಇದನ್ನು ರಾಜ್ಯದ ವೀಕ್ಷಕರಾಗಿ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಮಾಧ್ಯಮಗಳಿಗೆ ತಿಳಿಸಿದರು.
ಬಳಿಕ ಯಡಿಯೂರಪ್ಪ ಹೂ ಗುಚ್ಛ ನೀಡಿ ಶುಭ ಹಾರೈಸಿದರು.
ನಾಳೆ ಮಧ್ಯಾಹ್ನ 3.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಉತ್ತರ ಕರ್ನಾಟಕ ಭಾಗದ ಶಿಗ್ಗಾಂವಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮತ್ತು ಅದರಲ್ಲೂ ಲಿಂಗಾಯತ ಸಮಾಜದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಪುತ್ರ ಆಯ್ಕೆಆಗಿರುವುದು ಅವರ ಬೆಂಬಲಿಗರಿಗೆ ಸಂತಸ ತಂದಿದೆ.