ಬೆಂಗಳೂರು prajakiran.com : ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಅರಮನೆಯಲ್ಲಿ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋದಿಸಿದರು.
ಬಳಿಕ ರಾಜ್ಯಪಾಲರು, ಯಡಿಯೂರಪ್ಪ ಸೇರಿದಂತೆ ಅನೇಕರು ಹೂ ಗುಚ್ಚ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಪಕ್ಷದ ವೀಕ್ಷರಾದ ಧಮೇಂದ್ರ ಪ್ರಧಾನ್, ಕಿಶನರಡ್ಡಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಅರುಣಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ಹಿರಿಯ ಮುಖಂಡರು, ಶಾಸಕರು, ಬೊಮ್ಮಾಯಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.